ಅಧಿಕಾರಿಯಿಂದ ಲಂಚದ ಹಣವನ್ನು ಮರಳಿ ಕೊಡಿಸಿದ ಶಾಸಕ ಅಶೋಕ್ ರೈ

ಶೇರ್ ಮಾಡಿ

ಪುತ್ತೂರು: ಶೇಂದಿ ಕೊಂಡೊಯ್ಯುತ್ತಿದ್ದ ವ್ಯಕ್ತಿಯನ್ನು ತಡೆದು ಆತನ ವಿರುದ್ದ ಪ್ರಕರಣ ದಾಖಲಿಸಿ, ವಾಹನ ಸೀಝ್ ಮಾಡಿದ್ದಲ್ಲದೆ ಆತನಿಂದ ಲಂಚವನ್ನು ಪಡೆದ ಅಧಿಕಾರಿಯಿಂದ ಲಂಚದ ಹಣವನ್ನು ಶಾಸಕರು ಮರಳಿ ಕೊಡಿಸಿದ್ದಾರೆ.

ಕೋಡಿಂಬಾಡಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿಷಯ ತಿಳಿಸಿದ ಶಾಸಕ ಅಶೋಕ್ ರೈ ಶೇಂದಿ ಕೊಂಡೊಯ್ಯತ್ತಿದ್ದ ಓರ್ವ ಬಡಪಾಯಿಯ ವಾಹನ ನಿಲ್ಲಿಸಿದ್ದ ಅಬಕಾರಿ ಇಲಾಖೆಯವರು ಆತನನ್ನು ತಡೆದು ಶೇಂದಿ ಕೊಂಡು ಹೋಗುವುದು ಯಾಕೆ ಎಂದೆಲ್ಲಾ ಆತನನ್ನು ಬೆದರಿಸಿ ಆತನ ವಿರುದ್ದ ಪ್ರಕರಣ ದಾಖಲಿಸಿದ್ದು, ಮಾತ್ರವಲ್ಲದೆ ಆತನ ವಾಹನವನ್ನು ಜಪ್ತಿ ಮಾಡಿದ್ದಾರೆ. ಆ ಬಳಿಕ ಆತನಿಂದ 50,000 ಲಂಚವನ್ನು ಪಡೆದುಕೊಂಡಿದ್ದಾರೆ.
ಈ ವಿಚಾರವನ್ನು ಆತ ತನ್ನ ಬಳಿ ಹೇಳಿದಾಗ ಕಚೇರಿಗೆ ಅಧಿಕಾರಿಯನ್ನು ಕರೆಸಿ ಲಂಚ ಪಡೆದುಕೊಂಡಿದ್ದ ಮೊತ್ತವನ್ನು ಸೇಂದಿ ಮಾರಾಟಗಾರನಿಗೆ ಮರಳಿಸಿದ್ದೇನೆ. ಅನ್ಯಾಯವಾಗಿ ಓರ್ವ ಬಡಪಾಯಿಯಿಂದ ಲಂಚ ಪಡೆದುಕೊಳ್ಳುತ್ತಾರೆಂದರೆ ಏನೆನ್ನಬೇಕು. ಲಂಚ, ಭ್ರಷ್ಟಾಚಾರವನ್ನು ಸಹಿಸುವ ಪ್ರಶ್ನೆಯೇ ಇಲ್ಲ ಎಂದು ಶಾಸಕರು ಹೇಳಿದರು.

Leave a Reply

error: Content is protected !!