ರೈಲು ಹಳಿಗೆ ತಲೆಕೊಟ್ಟು ಆತ್ಮಹತ್ಯೆ

ಶೇರ್ ಮಾಡಿ

ಸುಬ್ರಹ್ಮಣ್ಯ: ಮಧ್ಯ ವಯಸ್ಕ ವ್ಯಕ್ತಿಯೊಬ್ಬರು ರೈಲು ಹಳಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ರಾತ್ರಿ ನೆಟ್ಟಣದಲ್ಲಿ ನಡೆದಿದೆ.

ಕಡಬ ತಾಲೂಕಿನ ಐನೆಕಿದು ಪೈಲಾಜೆ ನಿವಾಸಿ ಧರ್ಮರಾಜ ಮುತ್ಲಾಜೆ (45) ಈ ಕೃತ್ಯ ಎಸಗಿದವರು.
ಧರ್ಮರಾಜ್ ಎಲಿಮಲೆ ರಬ್ಬರ್ ಫ್ಯಾಕ್ಟರಿಯಲ್ಲಿ ಕಾರ್ಮಿಕರಾಗಿ ದುಡಿಯುತ್ತಿದ್ದು, ಕೆಲ ಸಮಯಗಳಿಂದ ಕೆಲಸಕ್ಕೆ ಗೈರು ಹಾಜರಾಗುತ್ತಿದ್ದರು ಎಂದು ತಿಳಿದು ಬಂದಿದೆ. ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ. ಮೃತರು ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

Leave a Reply

error: Content is protected !!