ಬಸ್, ಕಾರು ಢಿಕ್ಕಿ: ದಂಪತಿ ಮೃತ್ಯು

ಶೇರ್ ಮಾಡಿ

ಮಡಿಕೇರಿ : ಭೀಕರ ರಸ್ತೆ ಅಪಘಾತದಲ್ಲಿ ಕೊಡಗು ಜಿಲ್ಲೆಯ ಸೋಮವಾರಪೇಟೆ ಬಳಿಯ ಹಿರಿಕರ ಗ್ರಾಮದ ದಂಪತಿ ಸಾವನ್ನಪ್ಪಿರುವ ಘಟನೆ ಬಿಳಿಕೆರೆ ಬಳಿಯ ರಂಗನಕೊಪ್ಪಲು ಹೆದ್ದಾರಿಯಲ್ಲಿ ಶನಿವಾವಾರ ವರದಿಯಾಗಿದೆ.

ಕೆಎಸ್ಸಾರ್ಟಿಸಿ ಬಸ್ ಮತ್ತು ಕಾರು ನಡುವೆ ಢಿಕ್ಕಿ ಸಂಭವಿಸಿ ಮೈಸೂರು ಕಡೆಗೆ ಕಾರಿನಲ್ಲಿ ಸಂಚರಿಸುತ್ತಿದ್ದ ನಿವೃತ್ತ ಪ್ರಾಂಶುಪಾಲ ಹಿರಿಕರ ಗ್ರಾಮದ ನಿವಾಸಿ ಹೆಚ್.ಬಿ.ಬೆಳ್ಳಿಯಪ್ಪ (66) ಸ್ಥಳದಲ್ಲೇ ಮೃತಪಟ್ಟರು.
ಬೆಳ್ಳಿಯಪ್ಪ ಅವರ ಪತ್ನಿ ವೀಣಾ ಅವರನ್ನು ಆಸ್ಪತ್ರೆಗೆ ಕರೆದೊಯ್ಯುವ ಸಂದರ್ಭ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ.
ಕಾರು ಸಂಪೂರ್ಣವಾಗಿ ಜಖಂಗೊಂಡಿದ್ದು, ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

error: Content is protected !!