ಮಳೆಗೆ ಮರ ಉರುಳಿ ಬಿದ್ದು ಓಮ್ನಿ ಜಖಂ

ಶೇರ್ ಮಾಡಿ

ವಿಟ್ಲ: ಭಾರೀ ಮಳೆ ಗಾಳಿಗೆ ಮನೆ ಮುಂಭಾಗ ನಿಲ್ಲಿಸಿದ್ದ ಓಮ್ನಿ ಕಾರಿನ ಮೇಲೆ ಮರ ಬಿದ್ದು ವಾಹನ ಸಂಪೂರ್ಣವಾಗಿ ಜಖಂಗೊಂಡ ಘಟನೆ ಮಾಣಿ-ಮೈಸೂರು ರಾಜ್ಯ ಹೆದ್ದಾರಿ ಕೊಡಾಜೆ ಎಂಬಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ.‌

ಕೊಡಾಜೆ ನಿವಾಸಿ ಇಸ್ಮಾಯಿಲ್ ಎಂಬವರಿಗೆ ಸೇರಿದ ಓಮ್ನಿ ಕಾರನ್ನು ತನ್ನ ಮನೆಯ ಸಮೀಪ ನಿಲ್ಲಿಸಿದ್ದರು. ಮಳೆ ಗಾಳಿಗೆ ಮಾವಿನ ಮರ ಕಾರಿನ ಮೇಲೆ ಉರುಳಿ ಬಿದ್ದಿದೆ.‌ ಇದರಿಂದ ಕಾರು ಸಂಪೂರ್ಣವಾಗಿ ಜಖಂಗೊಂಡಿದೆ ಎಂದು ತಿಳಿದು ಬಂದಿದೆ.

Leave a Reply

error: Content is protected !!