![](https://i0.wp.com/nesaranewsworld.com/wp-content/uploads/2023/06/WhatsApp-Image-2022-07-26-at-12.12.17-PM.jpeg?resize=586%2C659&ssl=1)
![](https://i0.wp.com/nesaranewsworld.com/wp-content/uploads/2023/07/WhatsApp-Image-2022-05-25-at-8.50.05-PM.jpeg?resize=584%2C949&ssl=1)
ಚಾರ್ಮಾಡಿ: ಚಾರ್ಮಾಡಿ ಘಾಟಿ ರಸ್ತೆಯಲ್ಲಿ ಎರಡು ಸರಕಾರಿ ಬಸ್ಸುಗಳು ಮುಖಾಮುಖಿ ಢಿಕ್ಕಿಯಾಗಿ ಸಂಭವಿಸಿದ ಅಪಘಾತದಲ್ಲಿ ಎರಡೂ ಬಸ್ಸಿನ ಚಾಲಕರ ಕಾಲಿಗೆ ಗಂಭೀರ ಗಾಯವಾದ ಘಟನೆ ಶುಕ್ರವಾರ ಸಂಭವಿಸಿದೆ.
![](https://i0.wp.com/nesaranewsworld.com/wp-content/uploads/2023/07/bus-1-620x349-1.jpg?resize=620%2C349&ssl=1)
ಘಟನೆಯಲ್ಲಿ ಎರಡು ಬಸ್ಸುಗಳ ಮುಂಭಾಗ ನುಜ್ಜುಗುಜ್ಜಾಗಿದ್ದು, ಗಂಭೀರ ಗಾಯಗೊಂಡ ಬಸ್ಸಿನ ಚಾಲಕರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಎರಡೂ ಬಸ್ಸಿನಲ್ಲಿ ಸುಮಾರು 80 ಮಂದಿ ಪ್ರಯಾಣಿಕರಿದ್ದರೆನ್ನಲಾಗಿದ್ದು ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ.
![](https://i0.wp.com/nesaranewsworld.com/wp-content/uploads/2023/07/bus1-620x383-1.jpg?resize=620%2C383&ssl=1)
ರಸ್ತೆ ಅಪಘಾತದಿಂದ ಚಾರ್ಮಾಡಿ ಘಾಟಿಯಲ್ಲಿ ಕಿ.ಮೀ.ಗಟ್ಟಲೇ ಟ್ರಾಫಿಕ್ ಜಾಮ್ ಉಂಟಾಗಿದ್ದು ವಾಹನ ಸವಾರರು ಪರದಾಡುವಂತಾಗಿದೆ, ಇದರ ನಡುವೆ ಕೆಲ ಪ್ರಯಾಣಿಕರು ಸುಮಾರು 10 ಕಿ.ಮೀ. ನಡೆದುಕೊಂಡು ಕೊಟ್ಟಿಗೆಹಾರ ತಲುಪಿದ್ದಾರೆ ಎನ್ನಲಾಗಿದೆ.
ಮಳೆಗಾಲದಲ್ಲಿ ಈ ಪ್ರದೇಶದಲ್ಲಿ ದಟ್ಟ ಮಂಜು ಅವರಿಸುತ್ತಿದ್ದು ವಾಹನ ಸವಾರರಿಗೆ ಭಾರಿ ತೊಂದರೆಯಾಗುತ್ತಿದ್ದು, ಮತ್ತೊಂದೆಡೆ ಕಳೆದ ಭಾರಿ ಅಂದರೆ 2019ರಲ್ಲಿ ರಸ್ತೆ ಕುಸಿತಗೊಂಡ ಜಾಗದ ಕಾಮಗಾರಿ ಇನ್ನೂ ಪೂರ್ಣಗೊಳಿಸದೆ ಇರುವುದು ಅಪಘಾತಕ್ಕೆ ಕಾರಣವೆನ್ನಲಾಗಿದೆ.
![](https://i0.wp.com/nesaranewsworld.com/wp-content/uploads/2023/07/WhatsApp-Image-2023-06-20-at-6.14.07-PM-1.jpeg?resize=581%2C822&ssl=1)
![](https://i0.wp.com/nesaranewsworld.com/wp-content/uploads/2023/03/WhatsApp-Image-2023-03-06-at-6.15.00-PM.jpeg?resize=572%2C906&ssl=1)