![](https://i0.wp.com/nesaranewsworld.com/wp-content/uploads/2023/07/Screenshot-2023-07-12-162839.jpg?resize=370%2C402&ssl=1)
ಉಪ್ಪಿನಂಗಡಿ: ಅನಾರೋಗ್ಯದಿಂದಾಗಿ ಉಪ್ಪಿನಂಗಡಿ ಠಾಣಾ ಹೆಡ್ ಕಾನ್ಸ್ಟೇಬಲ್ ಕೃಷ್ಣಪ್ಪ ನಾಯ್ಕ್ ಜಿ ರವರು ಜು.12 ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಮೂಲತಃ ಮಾಣಿ ಸಮೀಪದ ನೇರಳಕಟ್ಟೆ ನಿವಾಸಿಯಾಗಿರುವ ಕೃಷ್ಣಪ್ಪ ರವರು ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್ಟೇಬಲ್ ಆಗಿ ಸುಮಾರು 6 ವರ್ಷಗಳಿಂದ ಕರ್ತವ್ಯ ನಿರ್ವಹಿಸಿಕೊಂಡಿದ್ದರು. ಅನಾರೋಗ್ಯದಿಂದಾಗಿ ಅವರು ಕಳೆದ ಒಂದು ವರ್ಷಗಳಿಂದ ರಜೆಯಲ್ಲಿದ್ದರು.
ಕೃಷ್ಣಪ್ಪ ರವರು ಪೊಲೀಸ್ ಇಲಾಖೆಯಲ್ಲಿ ಸುಮಾರು 26 ವರುಷಗಳ ಕಾಲ ಕರ್ತವ್ಯ ನಿರ್ವಹಿಸಿದ್ದರು.
ಮೃತರು ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿ ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ.
![](https://i0.wp.com/nesaranewsworld.com/wp-content/uploads/2023/07/WhatsApp-Image-2023-06-20-at-6.14.07-PM-4.jpeg?resize=577%2C816&ssl=1)
![](https://i0.wp.com/nesaranewsworld.com/wp-content/uploads/2023/07/WhatsApp-Image-2023-06-19-at-2.49.48-PM-1.jpeg?resize=575%2C814&ssl=1)