![](https://i0.wp.com/nesaranewsworld.com/wp-content/uploads/2023/07/1-2.jpg?resize=1024%2C439&ssl=1)
ನೆಲ್ಯಾಡಿ ಜ್ಞಾನೋದಯ ಬೆಥನಿ ಪದವಿ ಪೂರ್ವ ಕಾಲೇಜು ನ 2023-24ನೇ ಸಾಲಿನ ಶಿಕ್ಷಕ-ರಕ್ಷಕ ಸಂಘದ ಮಹಾಸಭೆ ಹಾಗೂ ಪದಾಧಿಕಾರಿಗಳ ಆಯ್ಕೆ ಜು.20 ರಂದು ನಡೆಯಿತು.
![](https://i0.wp.com/nesaranewsworld.com/wp-content/uploads/2023/07/WhatsApp-Image-2023-07-20-at-17.39.31.jpg?resize=1024%2C422&ssl=1)
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಫಾ.ತೋಮಸ್ ಬಿಜಿಲಿ ಓಐಸಿ ವಹಿಸಿ ಮಾತನಾಡಿದ ಅವರು ಶಾಲೆಯ ಅಭಿವೃದ್ಧಿಗೆ ಸಲಹೆ ಸೂಚನೆಗಳನ್ನು ನೀಡಿ ಸಹಕರಿಸುವಂತೆ ವಿನಂತಿಸಿಕೊಂಡರು.
ವೇದಿಕೆಯಲ್ಲಿ ಉಪಪ್ರಾಂಶುಪಾಲರಾದ ಜೋಸ್ ಎಂ.ಜೆ, ಪದವಿ ಪೂರ್ವ ಕಾಲೇಜಿನ ಎಚ್ ಓ ಡಿ ಸುಶೀಲ್ ಕುಮಾರ್, ದೈಹಿಕ ಶಿಕ್ಷಕ ನಿರ್ದೇಶಕರಾದ ಮನೋಜ್ ಕೆ.ಜೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.
![](https://i0.wp.com/nesaranewsworld.com/wp-content/uploads/2023/07/WhatsApp-Image-2023-07-20-at-17.43.36-1.jpg?resize=1024%2C467&ssl=1)
ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ಜೋಸ್ ಪ್ರಕಾಶ್ ಸ್ವಾಗತಿಸಿದರು, ಶಿಕ್ಷಕ ರಕ್ಷಕ ಸಂಘದ ಕಾರ್ಯದರ್ಶಿ ಶ್ರೀಮತಿ ದೀಪಿಕಾ ಡಿ.ಎಂ ವಂದಿಸಿದರು, ಶ್ರೀಮತಿ ಲುಸ್ಸಿ ಕಾರ್ಯಕ್ರಮ ನಿರೂಪಿಸಿದರು.
ಶಿಕ್ಷಕ-ರಕ್ಷಕ ಸಂಘದ 2023-24 ನೇ ಸಾಲಿನ ನೂತನ ಅಧ್ಯಕ್ಷರಾಗಿ ಜಯಾನಂದ ಬಂಟ್ರಿಯಾಲ್, ಉಪಾಧ್ಯಕ್ಷರಾಗಿ ಶ್ರೀಮತಿ ಜೆಸಿಂತಾ ಡಿ’ಸೋಜಾ, ಉಪ ಕಾರ್ಯದರ್ಶಿಯಾಗಿ ಸುಧೀರ್ ಕುಮಾರ್ ಆಯ್ಕೆಯಾದರು.
![](https://i0.wp.com/nesaranewsworld.com/wp-content/uploads/2023/07/WhatsApp-Image-2023-06-20-at-6.14.07-PM-4.jpeg?resize=577%2C816&ssl=1)
![](https://i0.wp.com/nesaranewsworld.com/wp-content/uploads/2023/07/WhatsApp-Image-2023-06-19-at-2.49.48-PM-1.jpeg?resize=575%2C814&ssl=1)