ನೆಲ್ಯಾಡಿ: ಉಚಿತ ಆರೋಗ್ಯ ತಪಾಸಣಾ ಕಾರ್ಯಕ್ರಮ

ಶೇರ್ ಮಾಡಿ

ನೆಲ್ಯಾಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ,ಬಿ ಸಿ ಟ್ರಸ್ಟ್(ರಿ)ಕಡಬ ತಾಲೂಕು ಇದರ ವತಿಯಿಂದ ಜ್ಞಾನವಿಕಾಸ ಮಹಿಳಾ ಕಾರ್ಯಕ್ರಮದಡಿಯಲ್ಲಿ ಪ್ರಗತಿ ಬಂದು ಸ್ವಸಹಾಯ ಸಂಘಗಳ ಒಕ್ಕೂಟ ಮತ್ತು ಜನಜಾಗೃತಿ ವೇದಿಕೆ ನೆಲ್ಯಾಡಿ ವಲಯ ಇದರ ಸಹಕಾರದೊಂದಿಗೆ ಎಸ್ ಡಿ ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಯ ಸಹಯೋಗದಲ್ಲಿ ಅಖಿಲ ಕರ್ನಟಕದ ಜನಜಾಗೃತಿ ವೇದಿಕೆಯ ವಲಯಾದ್ಯಕ್ಷರಾದ ಜಯನಂದ ಬಂಟ್ರಿಯಾಲ್ ರವರ ಅಧ್ಯಕ್ಷತೆ ಯಲ್ಲಿ ಉಚಿತ ಆರೋಗ್ಯ ತಪಾಸಣಾ ಕಾರ್ಯಕ್ರಮ ವನ್ನು ನಡೆಸಲಾಯಿತು.

ಕಾರ್ಯಕ್ರಮವನ್ನು ಮೇದಪ್ಪ ಗೌಡ ಎನ್ ಯೋಜನಾಧಿಕಾರಿ ಶ್ರೀ.ಕ್ಷೇ.ಧ.ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್(ರಿ)ಕಡಬ ತಾಲೂಕು ಉದ್ಘಾಟಿಸಿ ಜ್ಞಾನವಿಕಾಸ ಕಾರ್ಯಕ್ರಮದ ಸದುದ್ದೇಶ ಹಾಗೂ ಇದರಿಂದಾಗುವ ಪ್ರಯೋಜನದ ಕುರಿತು ಮಾರ್ಗದರ್ಶನ ನೀಡಿದರು. ಮುಖ್ಯ ಅತಿಥಿಗಳಾಗಿ ಎಂ.ಜನಾರ್ಧನ ನಿರ್ದೇಶಕರು ಎಸ್ ಡಿ ಎಂ ಮಲ್ಟಿ ಸ್ಪೆಷಲಿಟಿ ಹಾಸ್ಟೆಲ್ ಉಜಿರೆ ಇವರು ಆಸ್ಪತ್ರೆಯಿಂದ ಸಿಗಬಹುದಾದ ಸೌಲಭ್ಯಗಳ ಕುರಿತು ಮತ್ತು ಖಾಯಿಲೆಗಳ ಲಕ್ಷಣ ಕಂಡುಬಂದ ಕೂಡಲೇ ಪರೀಕ್ಷೆ ಮಾಡಿಸಿ ಕಾಯಿಲೆ ಪತ್ತೆ ಹಚ್ಚಿ ಪರಿಹಾರ ಕಂಡು ಕೊಳ್ಳಬೇಕು ಎಂದು ತಿಳಿಸಿದರು.
ಡಾ.ಜಸ್ಟಿನ್ ಅವರು ಡೆಂಗ್ಯೂ ಜ್ವರದ ಕುರಿತು ಮಾಹಿತಿ ನೀಡಿದರು. ಪ್ರಗತಿ ಬಂದು ಒಕ್ಕೂಟ ನೆಲ್ಯಾಡಿ ವಲಯಧ್ಯಕ್ಷರಾದ ಕುಶಾಲಪ್ಪ ಗೌಡ ಹಾಗೂ ಎಸ್ ಡಿ ಎಂ ಸಿ ಅಧ್ಯಕ್ಷರಾದ ಬಿನೋಜ್ ಒಕ್ಕೂಟಗಳ ಅಧ್ಯಕ್ಷರುಗಳಾದ ಬಾಲಕೃಷ್ಣ ಗೌಡ ಅಡಿಲು, ಸುಮಿತ್ರ ಉಪಸ್ಥಿತರಿದ್ದರು.

ವಲಯದ ಮೇಲ್ವಿಚಾರಕರಾದ ವಿಜೇಶ್ ಜೈನ್ ಸ್ವಾಗತಿಸಿ. ಜ್ಞಾನ ವಿಕಾಸ ಸಮನ್ವಯ ಅಧಿಕಾರಿ ಚೇತನ ನಿರೂಪಿಸಿದರು. ಸೇವಾ ಪ್ರತಿನಿಧಿ ನಮಿತಾ ಶೆಟ್ಟಿ ಪ್ರಾರ್ಥಿಸಿದರು. ಸೇವಾ ಪ್ರತಿನಿಧಿ ಹೇಮಾವತಿ ವಂದಿಸಿದರು.
ಜನ ಜಾಗೃತಿ ವೇದಿಕೆಯ ಸದಸ್ಯರು ಒಕ್ಕೂಟದ ಅಧ್ಯಕ್ಷರು ಪದಾಧಿಕಾರಿಗಳು ವಲಯದ ಸೇವಾ ಪ್ರತಿನಿಧಿಗಳು ಕಾರ್ಯಕ್ರಮಕ್ಕೆ ಸಹಕರಿಸಿದರು. ಒಕ್ಕೂಟದ ಸದಸ್ಯರು ಹಾಗೂ ಜ್ಞಾನವಿಕಾಸ ಕೇಂದ್ರ ಸದಸ್ಯರು ಹಾಗೂ ನಾಗರಿಕರು ಶಿಬಿರ ದಲ್ಲಿ ಕಣ್ಣಿನ ಪರೀಕ್ಷೆ, ಬಿಪಿ, ಶುಗರು, ಇ.ಸಿ.ಜಿ ಇತ್ಯಾದಿ ಪರೀಕ್ಷೆಯನ್ನು ಮಾಡಿಸಿ ಪ್ರಯೋಜನ ಪಡೆದುಕೊಂಡರು

Leave a Reply

error: Content is protected !!