![](https://i0.wp.com/nesaranewsworld.com/wp-content/uploads/2023/07/bus-4-620x413-1.jpg?resize=620%2C413&ssl=1)
ಕಾರ್ಕಳ: ಕಾರ್ಕಳ-ಉಡುಪಿ ರಾಜ್ಯ ಹೆದ್ದಾರಿಯ ಬೈಲೂರು ಬಸ್ತ್ರಿ ಬಳಿ ಖಾಸಗಿ ಬಸ್ ಮತ್ತು ಟಿಪ್ಪರ್ ನಡುವೆ ಮುಖಾಮುಖಿ ಡಿಕ್ಕಿಯಾದ ಘಟನೆ ಸೋಮವಾರ ನಡೆದಿದೆ. ಘಟನೆ ಬೈಲೂರು ಬಸ್ತ್ರಿ ಶಾಲೆಯ ಮುಂಭಾಗ ಸಂಭವಿಸಿದ್ದು ಬಸ್ ಚಾಲಕ ಮತ್ತು ಪ್ರಯಾಣಿಕರು ಗಾಯಗೊಂಡಿದ್ದಾರೆ.
ಉಡುಪಿಯಿಂದ ಕಾರ್ಕಳಕ್ಕೆ ಬರುತ್ತಿದ್ದ ಬಿಎಂಎಸ್ ಬಸ್ ಮತ್ತು ಕಾರ್ಕಳದಿಂದ ಬೈಲೂರಿಗೆ ಸಾಗುತ್ತಿದ್ದ ಟಿಪ್ಪರ್ ನಡುವೆ ಡಿಕ್ಕಿಯಾಗಿರುವುದು.
ಬಸ್ಸಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಟಿಪ್ಪರ್ಗೂ ಹಾನಿಯಾಗಿದೆ. ಕಾರ್ಕಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
![](https://i0.wp.com/nesaranewsworld.com/wp-content/uploads/2023/07/WhatsApp-Image-2023-06-20-at-6.14.07-PM-4.jpeg?resize=577%2C816&ssl=1)
![](https://i0.wp.com/nesaranewsworld.com/wp-content/uploads/2023/07/WhatsApp-Image-2023-06-19-at-2.49.48-PM-1.jpeg?resize=575%2C814&ssl=1)