ಹೆರಿಗೆಗೆಂದು ಆಸ್ಪತ್ರೆಗೆ ದಾಖಲಾಗಿದ್ದ ಗರ್ಭಿಣಿ ಮಹಿಳೆ ಮೃತ್ಯು| ವೈದ್ಯರ ನಿರ್ಲಕ್ಷ್ಯ ಎಂದು ಮಹಿಳೆಯ ಸಂಬಂಧಿಕರಿಂದ ಆಕ್ರೋಶ

ಶೇರ್ ಮಾಡಿ

ಮಂಗಳೂರು: ಹೆರಿಗೆಗೆಂದು ಆಸ್ಪತ್ರೆಗೆ ದಾಖಲಾಗಿದ್ದ ಗರ್ಭಿಣಿ ಮಹಿಳೆಯೊಬ್ಬರು ಆಸ್ಪತ್ರೆಯಲ್ಲೇ ಮೃತಪಟ್ಟ ಘಟನೆಯು ವರದಿಯಾಗಿದ್ದು.

ಬೆಳ್ತಂಗಡಿ ತಾಲೂಕಿನ ಕುಕ್ಕೇಡಿ ನಿವಾಸಿ ಪ್ರದೀಪ್ ಆಚಾರ್ಯ ಎಂಬವರ ಪತ್ನಿ ಶಿಲ್ಪಾ ಆಚಾರ್ಯ ಮೃತ ದುರ್ದೈವಿಯಾಗಿದ್ದು

ಸಾವಿಗೆ ವೈದ್ಯರ ನಿರ್ಲಕ್ಷ್ಯ ಎನ್ನುವ ಗಂಭೀರ ಆರೋಪ ವ್ಯಕ್ತವಾದ ಬೆನ್ನಲ್ಲೇ ಮಹಿಳೆಯ ಸಂಬಂಧಿಕರು ಪ್ರತಿಭಟಿಸಿದಾಗ ಪೊಲೀಸ್ ಬಲ ಪ್ರಯೋಗ ನಡೆದಿದ್ದು, ಸಾವಿಗೆ ಕಾರಣವಾದ ಆಸ್ಪತ್ರೆಯ ವೈದ್ಯರಾದ ವೀಣಾ ಭಗವಾನ್, ಡೀನ್ ಅಶೋಕ್ ಹೆಗ್ಡೆ, ಡಾ.ಗುರುರಾಜ್ ತಂತ್ರಿ ಎಂಬವರ ವಿರುದ್ಧ ವಿರುದ್ಧ ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಬಗ್ಗೆ ಆಕೆಯ ಪತಿ ಠಾಣೆಗೆ ದೂರು ನೀಡಿದ ಬಳಿಕ ಮಳೆಯ ನಡುವೆಯ ಆಸ್ಪತ್ರೆಯ ಮುಂಭಾಗದಲ್ಲಿ ಆಡಳಿತ ಮಂಡಳಿಯ ಮಧ್ಯಪ್ರವೇಶಕ್ಕಾಗಿ ಪ್ರತಿಭಟಿಸಲಾಯಿತು.
ಈ ವೇಳೆ ಪೊಲೀಸ್ ಬಲ ಪ್ರಯೋಗ ನಡೆದಿದೆ ಎನ್ನುವ ಆರೋಪವೂ ಕೇಳಿ ಬಂದಿದ್ದು, ಚೊಚ್ಚಲ ಹೆರಿಗೆಗೆ ದಾಖಲಾದ ಗರ್ಭಿಣಿಯ ಸಾವಿಗೆ ನ್ಯಾಯ ಕೇಳಿದಾಗ ಪೊಲೀಸರು ಬಲ ಪ್ರಾಯೋಗಿಸಿ ಶವ ಸಾಗಿಸಿದ್ದಾರೆ ಎನ್ನುವ ಗಂಭೀರ ಆರೋಪ ವ್ಯಕ್ತವಾಗುವ ಮಧ್ಯೆ ಎ.ಜೆ ಆಸ್ಪತ್ರೆಯ ನಿರ್ಲಕ್ಷ್ಯಕ್ಕೆ ನಾಗರೀಕ ಸಮಾಜ ಆಕ್ರೋಶ ಹೊರಹಾಕಿದೆ.

Leave a Reply

error: Content is protected !!