![](https://i0.wp.com/nesaranewsworld.com/wp-content/uploads/2023/07/WhatsApp-Image-2023-07-26-at-19.17.57-1.jpg?resize=1024%2C458&ssl=1)
ನೆಲ್ಯಾಡಿ: ಸಂತ ಜಾರ್ಜ್ ವಿದ್ಯಾಸಂಸ್ಥೆಯಲ್ಲಿ ಮಳೆಯ ನಡುವೆಯೂ ಕಾರ್ಗಿಲ್ ವಿಜಯ ದಿವಸವನ್ನು ಸಂಸ್ಥೆಗಳ ಸಂಚಾಲಕರಾದ ರೆ.ಫಾ.ನೋಮಿಸ್ ಕುರಿಯಕೋಸ್ ಅವರ ನೇತೃತ್ವದಲ್ಲಿ ಆಚರಿಸಲಾಯಿತು.
ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ಎಲ್ಲಾ ಯೋಧರಿಗೆ ಸರ್ವ ಧರ್ಮ ಪ್ರಾರ್ಥನೆ, ಸಮೂಹ ಗೀತೆಯ ಮುಖಾಂತರ ಗೌರವ ಸಲ್ಲಿಸಲಾಯಿತು.
![](https://i0.wp.com/nesaranewsworld.com/wp-content/uploads/2023/07/WhatsApp-Image-2023-07-26-at-19.17.58.jpg-2.jpg?resize=1024%2C468&ssl=1)
ಕಾಲೇಜಿನ ಪ್ರಾಂಶುಪಾಲರಾದ ಎಂ.ಕೆ ಏಲಿಯಸ್ ಅವರು ಕಾರ್ಗಿಲ್ ಯುದ್ಧದ ಹಿನ್ನೆಲೆ ಮತ್ತು ಪರಿಣಾಮವನ್ನು ವಿವರಿಸಿದರು. ಸಂಸ್ಥೆಯ ಎಲ್ಲಾ ಉಪನ್ಯಾಸಕರು, ಅಧ್ಯಾಪಕರು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದು, ಹುತಾತ್ಮರಾದ ಯೋಧರಿಗೆ ಗೌರವ ಸಲ್ಲಿಸಿದರು.
![](https://i0.wp.com/nesaranewsworld.com/wp-content/uploads/2023/07/WhatsApp-Image-2023-07-26-at-19.17.57.jpg-1.jpg?resize=1024%2C467&ssl=1)
ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಹರಿಪ್ರಸಾದ್.ಕೆ ಸ್ವಾಗತಿಸಿದರು. ಕನ್ನಡ ಮಾಧ್ಯಮದ ಮುಖ್ಯ ಗುರುಗಳಾದ ಥಾಮಸ್.ಎಂ .ಐ ಅವರು ವಂದಿಸಿದರು.
![](https://i0.wp.com/nesaranewsworld.com/wp-content/uploads/2023/07/WhatsApp-Image-2023-06-20-at-6.14.07-PM-4.jpeg?resize=577%2C816&ssl=1)
![](https://i0.wp.com/nesaranewsworld.com/wp-content/uploads/2023/07/WhatsApp-Image-2023-07-25-at-14.10.35-2.jpg?resize=576%2C718&ssl=1)