![](https://i0.wp.com/nesaranewsworld.com/wp-content/uploads/2023/07/bjp-protest-in-udupi-102194121.webp?resize=700%2C525&ssl=1)
ಉಡುಪಿ : ಇಲ್ಲಿನ ಖಾಸಗಿ ಅರೆ ವೈದ್ಯಕೀಯ ಕಾಲೇಜಿನ ವಾಶ್ ರೂಮ್ನಲ್ಲಿ ಮೂವರು ವಿದ್ಯಾರ್ಥಿನಿಯರು ನಡೆಸಿದ ವಿದ್ಯಾರ್ಥಿನಿಯರ ಖಾಸಗಿ ವಿಡಿಯೋ ಚಿತ್ರೀಕರಣಕ್ಕೆ ಸಂಬಂಧಿಸಿದ ವಿವಾದ ತಾರಕಕ್ಕೇರಿದೆ. ಪ್ರಕರಣದ ಸಮಗ್ರ ತನಿಖೆಗೆ ಆಗ್ರಹಿಸಿ ಶುಕ್ರವಾರ ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ಹಾಗೂ ಎಸ್ಪಿ ಕಚೇರಿಗೆ ಮುತ್ತಿಗೆಯನ್ನು ಹಮ್ಮಿಕೊಂಡಿದ್ದ ಪರಿಣಾಮ ಭಾರೀ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿತ್ತು.
ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಗ್ರ ತನಿಖೆಗೆ ಆಗ್ರಹಿಸಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ನೇತೃತ್ವದಲ್ಲಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಜಿಲ್ಲಾ ಬಿಜೆಪಿ ಕಚೇರಿಯಿಂದ ಹೊರಟ ಬೃಹತ್ ಪ್ರತಿಭಟನಾ ಮೆರವಣಿಗೆ ಉಡುಪಿ ಸಿಟಿ ಬಸ್ ನಿಲ್ದಾಣ ಮಾರ್ಗವಾಗಿ ಬನ್ನಂಜೆ ಎಸ್ಪಿ ಕಚೇರಿವರೆಗೆ ಪ್ರತಿಭಟನೆ ನಡೆದಿದ್ದು, ರಾಜ್ಯ ಸರಕಾರದ ವಿರುದ್ಧ ಘೋಷಣೆ ಕೂಗಿದರು.
ಪ್ರತಿಭಟನೆ ಬಳಿಕ ಎಸ್ಪಿ ಕಚೇರಿ ಮುಂದೆಯೇ ಪ್ರತಿಭಟನಾ ಸಭೆ ನಡೆಸಿ ಪ್ರಕರಣದ ಸಮಗ್ರ ತನಿಖೆಯನ್ನು ನಡೆಸುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗುತ್ತದೆ.
![](https://i0.wp.com/nesaranewsworld.com/wp-content/uploads/2023/07/WhatsApp-Image-2023-06-20-at-6.14.07-PM-4.jpeg?resize=577%2C816&ssl=1)
![](https://i0.wp.com/nesaranewsworld.com/wp-content/uploads/2023/07/WhatsApp-Image-2023-07-25-at-14.10.35-2.jpg?resize=576%2C718&ssl=1)