ಬೆಳ್ತಂಗಡಿ:ಸಾರಿಗೆ ಬಸ್ಸಿನಲ್ಲಿ ಮಂಗಳೂರಿನಿಂದ ಚಿಕ್ಕಮಗಳೂರಿಗೆ ಸಂಚರಿಸುತ್ತಿದ್ದ ವಿದ್ಯಾರ್ಥಿನಿ ಜತೆ ಮಡಂತ್ಯಾರು ಸಮೀಪ ಯುವಕನೋರ್ವ ಅಸಭ್ಯವಾಗಿ ನಡೆದುಕೊಂಡ ಘಟನೆ ಜು.29 ರಂದು ನಡೆದಿದೆ.
ಇಂದಬೆಟ್ಟು ನಿವಾಸಿ ಕಬೀರ್ ಆರೋಪಿತ.
![](https://i0.wp.com/nesaranewsworld.com/wp-content/uploads/2023/07/Screenshot-2023-07-30-081314.jpg?resize=322%2C277&ssl=1)
ಚಿಕ್ಕಮಗಳೂರಿನ ಮೂಡಿಗೆರೆ ಯುವತಿ ತನ್ನೂರಿಗೆ ಮಂಗಳೂರಿನಿಂದ ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಬರುವ ವೇಳೆ ಜ್ಯೋತಿ ಬಳಿ ಕಬೀರ್ ತನ್ನ ಸೀಟಿನಲ್ಲಿ ಕುಳಿತಿದ್ದು, ಮಡಂತ್ಯಾರಿನಿಂದ ಸ್ವಲ್ಪ ಹಿಂದಕ್ಕೆ ತಲುಪಿದಾಗ ಅಸಭ್ಯವಾಗಿ ವರ್ತಿಸಿದ್ದು, ತಕ್ಷಣ ಪ್ರತೀರೋಧಿಸಿ ಉಜಿರೆಯ ಕಾಲೇಜೊಂದರಲ್ಲಿ ಓದುತ್ತಿದ್ದ ಸ್ನೇಹಿತರಿಗೆ ಮಾಹಿತಿ ನೀಡಿದ್ದರು.
ಈ ಬಗ್ಗೆ ಯುವತಿಯು ಪೋಷಕರಿಗೆ ಮಾಹಿತಿ ನೀಡಿ ಉಜಿರೆಯ ಬಳಿ ಬಸ್ಸು ಬಂದಾಗ ಆರೋಪಿತನನ್ನು ಬಸ್ಸು ಚಾಲಕ ಮತ್ತು ನಿರ್ವಾಹಕರ ಸಹಾಯ ಪಡೆದು ಬಸ್ಸಿನಿಂದ ಕೆಳಗೆ ಇಳಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
![](https://i0.wp.com/nesaranewsworld.com/wp-content/uploads/2023/07/WhatsApp-Image-2023-06-20-at-6.14.07-PM-4.jpeg?resize=577%2C816&ssl=1)
![](https://i0.wp.com/nesaranewsworld.com/wp-content/uploads/2023/07/WhatsApp-Image-2023-06-19-at-2.49.48-PM-1.jpeg?resize=575%2C814&ssl=1)