ಆಟೋ ರಿಕ್ಷಾ ಮತ್ತು ಕಾರು ನಡುವೆ ಅಪಘಾತ ಸಂಭವಿಸಿ ಆಟೋ ಚಾಲಕ ಗಾಯಗೊಂಡಿರುವ ಘಟನೆ ಸೂರಿಕುಮೇರು ಜಂಕ್ಷನ್ ನಲ್ಲಿ ನಡೆದಿದೆ.
ಅಪಘಾತದಲ್ಲಿ ಆಟೋ ಚಾಲಕ, ಸೂರಿಕುಮೇರ್ ನಿವಾಸಿ ಹನೀಪ್ ಗಾಯಗೊಂಡಿದ್ದಾರೆ. ರಿಕ್ಷಾ ಸೂರಿಕುಮೇರ್ ಮಾಣಿ ಕಡೆಗೆ ಹಾಗೂ ಕಾರು ಮಂಗಳೂರು ಕಡೆಯಿಂದ ಪುತ್ತೂರಿಗೆ ಚಲಾಯಿಸುತ್ತಿದ್ದಾಗ ಈ ಅವಘಢ ಸಂಭವಿಸಿದೆ.
ಕಾರಿನ ಚಾಲಕ ಮತ್ತು ಸಾರ್ವಜನಿಕರ ನಡುವೆ ಮಾತಿನ ಚಕಮಕಿಯೂ ನಡೆದಿದೆ. ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸರು ಆಗಮಿಸಿ, ಪರಿಶೀಲನೆ ನಡೆಸಿದ್ದಾರೆ.
![](https://i0.wp.com/nesaranewsworld.com/wp-content/uploads/2023/07/WhatsApp-Image-2023-07-19-at-17.13.19.jpg?resize=581%2C836&ssl=1)
![](https://i0.wp.com/nesaranewsworld.com/wp-content/uploads/2023/07/WhatsApp-Image-2023-06-20-at-6.14.07-PM-4.jpeg?resize=577%2C816&ssl=1)
![](https://i0.wp.com/nesaranewsworld.com/wp-content/uploads/2023/07/WhatsApp-Image-2023-06-19-at-2.49.48-PM-1.jpeg?resize=575%2C814&ssl=1)