ದೇವಸ್ಥಾನಗಳ ಕಾಮಗಾರಿಗಳಿಗೆ ಬ್ರೇಕ್‌ – ವಿರೋಧ ವ್ಯಕ್ತವಾಗುತ್ತಿದ್ದಂತೆ ಸುತ್ತೋಲೆ ವಾಪಸ್‌

ಶೇರ್ ಮಾಡಿ

ದೇವಸ್ಥಾನಗಳ ಅಭಿವೃದ್ಧಿಗೆ ಬಿಡುಗಡೆ ಮಾಡಿದ ಅನುದಾನಕ್ಕೆ ಬ್ರೇಕ್‌ ಹಾಕಿದ್ದ ರಾಜ್ಯ ಸರ್ಕಾರ ಈಗ ಸುತ್ತೋಲೆಯನ್ನು ಹಿಂದಕ್ಕೆ ಪಡೆದಿದೆ.
ಸಚಿವರ ಗಮನಕ್ಕೆ ಬಾರದೇ ಈ ಆದೇಶ ಪ್ರಕಟಿಸಲಾಗಿತ್ತು. ಈಗ ಆದೇಶವನ್ನು ಹಿಂದಕ್ಕೆ ಪಡೆಯುತ್ತಿದ್ದೇವೆ ಎಂದು ತಿಳಿಸಿದರು.

ಜಿಲ್ಲೆಯಾದ್ಯಾಂತ ಮುಜರಾಯಿ ವ್ಯಾಪ್ತಿಯ ಕಾಮಗಾರಿಗಳು ನಡೆಯುತ್ತಿತ್ತು. ಈ ಕಾಮಗಾರಿ ಮಾಡಲು 50% ಅನುದಾನವನ್ನು ಬಿಡುಗಡೆ ಮಾಡಿ ತಡೆ ಹಿಡಿಯಲಾಗಿತ್ತು. ನಮ್ಮ ವ್ಯಾಪ್ತಿಯಲ್ಲಿ ನಾವು ಆದೇಶ ಹೊರಡಿಸಿದ್ದೆವು. ಈಗ ಮತ್ತೊಂದು ಆದೇಶವನ್ನು ಪ್ರಕಟಿಸಿದ್ದೇವೆ ಎಂದು ತಿಳಿಸಿದರು.
ಆಗಸ್ಟ್ 14 ರಂದು ಎಲ್ಲಾ ಜಿಲ್ಲಾಧಿಕಾರಿಗಳಿಗೆ ಆದೇಶ ಹೊರಡಿಸಿದ್ದ ಮುಜರಾಯಿ ಇಲಾಖೆ ದೇವಾಲಯದ ಅಭಿವೃದ್ಧಿ ಮತ್ತು ಜೀರ್ಣೋದ್ಧಾರಕ್ಕೆ ಮಂಜೂರಾದ ಹಣದಲ್ಲಿ ಕೈಗೊಂಡಿರುವ ಕಾಮಗಾರಿಗಳನ್ನು ನಡೆಸದಂತೆ ಉಲ್ಲೇಖಿಸಿತ್ತು.

ಈ ಹಿಂದಿನ ಸುತ್ತೋಲೆಯಲ್ಲಿ ಏನಿತ್ತು?
1. ಸರ್ಕಾರದಿಂದ ದೇವಾಲಯಗಳ ಅಭಿವೃದ್ಧಿ ಜೀರ್ಣೋದ್ಧಾರಕ್ಕಾಗಿ ಸಾಮಾನ್ಯ ಯೋಜನೆಯಡಿ ಅನುದಾನ ಮಂಜೂರಾಗಿದ್ದು ಕಾಮಗಾರಿಗಳನ್ನ ಪ್ರಾರಂಭಿಸಿದೆ ಇರುವ ಸಂಸ್ಥೆಗಳಿಗೆ ಮುಂದಿನ ನಿರ್ದೇಶನದ ವರೆಗೂ ಹಣ ಬಿಡುಗಡೆ ಮಾಡಬಾರದು.
2.2022-23ನೇ ಸಾಲಿನಲ್ಲಿ ಸಾಮಾನ್ಯ ಯೋಜನೆ ಅಡಿ ಮಂಜೂರಾಗಿರುವ ಅನುದಾನದ ಪೈಕಿ ಈಗಾಗಲೇ 50% ರಷ್ಟು ಹಣ ಬಿಡುಗಡೆಯಾಗಿ ಆಡಳಿತಾತ್ಮಕ ಮಂಜೂರಾತಿ ನೀಡಿದ್ದು ಹಣ ಬಿಡುಗಡೆ ಮಾಡದಿದ್ದಲ್ಲಿ ಸದರಿ ಕಾಮಗಾರಿಗೆ ಹಣವನ್ನ ಬಿಡುಗಡೆ ಮಾಡಬಾರದು ಹಾಗೂ ಪ್ರಾರಂಭಿಸಿದೇ ಇದ್ದಲ್ಲಿ ಕಾಮಗಾರಿಯನ್ನು ಪ್ರಾರಂಭಿಸತಕ್ಕದ್ದಲ್ಲ.
3. ಆಡಳಿತಾತ್ಮಕ ಮಂಜೂರಾತಿಗೆ ಪ್ರಸ್ತಾವನೆ ಸ್ವೀಕೃತವಾಗಿದ್ದಲ್ಲಿ ಆಡಳಿತಾತ್ಮಕ ಮಂಜೂರಾತಿಯನ್ನು ಮುಂದಿನ ನಿರ್ದೇಶನವರೆಗೂ ತಡೆಹಿಡಿಯುವುದು.

Leave a Reply

error: Content is protected !!