ಕಾಲೇಜು ವಿದ್ಯಾರ್ಥಿ ನಾಪತ್ತೆ; ಠಾಣೆಯಲ್ಲಿ ಪ್ರಕರಣ ದಾಖಲು

ಶೇರ್ ಮಾಡಿ

ಬೆಳ್ತಂಗಡಿ: ಇಲ್ಲಿನ ಗುರು ದೇವ ಕಾಲೇಜು ಬಳಿಯ ನಿವಾಸಿ ತೋಪೆ ಗೌಡರ ಮಗ ಪುನೀತ್‌ ಎಸ್‌.ಟಿ.(21) ಕಾಣೆಯಾದ ಘಟನೆ ಸೋಮವಾರ ನಡೆದಿದೆ.

3ನೇ ವರ್ಷದ ಬಿ.ಎಸ್‌.ಸಿ ವಿದ್ಯಾಭ್ಯಾಸ ಮಾಡಿಕೊಂಡಿದ್ದ ಈತ ತನ್ನ ತಂಗಿ ಕಾಲೇಜಿಗೆ ತೆರಳಿದ ಬಳಿಕ ಒಬ್ಬನೇ ಮನೆಯಲ್ಲಿದ್ದು ತಾಯಿ ಸಕಲೇಶಪುರದಿಂದ ಬಂದು ನೋಡುವಾಗ ಹಾಲ್‌ನ ಬೆಡ್‌ ಮೇಲೆ ಒಂದು ಪತ್ರ ಬರೆದಿಟ್ಟು ಹೋಗಿದ್ದಾನೆ.

ಆತನನ್ನು ಪಕ್ಕದ ಮನೆಯ ಗಿರಿಜಾ ಅವರು ಮಧ್ಯಾಹ್ನ ನೋಡಿದ್ದು ಬಳಿಕ ಕಾಣೆಯಾಗಿದ್ದಾನೆ ಎನ್ನಲಾಗಿದೆ. ಈತನ ಕುರಿತು ಸಂಬಂಧಿಕರ ಮನೆ ಎಲ್ಲೆಡೆ ಹುಡುಕಾಡಿದರೂ ಪತ್ತೆಯಾಗದ ಕಾರಣ ತಾಯಿ ಗೀತಾ ನೀಡಿದ ದೂರಿನಂತೆ ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

error: Content is protected !!