![](https://i0.wp.com/nesaranewsworld.com/wp-content/uploads/2023/09/Tumakuru.webp?resize=772%2C440&ssl=1)
ಅಂತ್ಯಕ್ರಿಯೆಗೆ ಜಾಗವಿಲ್ಲದೆ ಕುಟುಂಬಸ್ಥರು ನಡು ರಸ್ತೆಯಲ್ಲೇ ಶವ ಸಂಸ್ಕಾರ ಮಾಡಿದ ಘಟನೆ ಜಿಲ್ಲೆಯ ಪಾವಗಡ ತಾಲೂಕಿನ ಕ್ಯಾತಗಾನಹಳ್ಳಿಯಲ್ಲಿ ನಡೆದಿದೆ. ಗ್ರಾಮದ ಈರಣ ಎಂಬುವರು ಅನಾರೋಗ್ಯ ಸಮಸ್ಯೆಯಿಂದ ಸಾವನ್ನಪ್ಪಿದ್ದರು. ಗ್ರಾಮದ ಹೊರವಲಯದ ರಾಜಕಾಲುವೆ ಪಕ್ಕದ ಸರ್ಕಾರಿ ಜಾಗದಲ್ಲಿ ಅಂತ್ಯಕ್ರಿಯೆ ನೆರವೇರಿಸಲು ಕುಟುಂಬಸ್ಥರು ಮುಂದಾಗಿದ್ದರು. ಈ ವೇಳೆ ಈ ಜಾಗ ನಮ್ಮದು ಎಂದು ಪಕ್ಕದ ಜಮೀನು ಮಾಲೀಕರು ಜಗಳ ಮಾಡಿದ್ದಾರೆ. ಕೊನೆಗೆ ವಿಧಿ ಇಲ್ಲದೆ ಕುಟುಂಬಸ್ಥರು ರಸ್ತೆಯಲ್ಲೇ ಶವ ಸಂಸ್ಕಾರ ಮಾಡಿದ್ದಾರೆ.
ಈ ವಿಚಾರ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ತಹಶಿಲ್ದಾರ್ ವರದರಾಜ್, ರುದ್ರಭೂಮಿಗಾಗಿ ಬೇರೆ ಜಾಗ ನೀಡುವುದಾಗಿ ಗ್ರಾಮಸ್ಥರಿಗೆ ಭರವಸೆ ನೀಡಿದರು. ಶವ ಸಂಸ್ಕಾರಕ್ಕೆ ಅಡ್ಡಿಪಡಿಸಿದವರ ವಿರುದ್ಧ ಅರಸಿಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
![](https://i0.wp.com/nesaranewsworld.com/wp-content/uploads/2023/09/TUTORIYAL.jpg?resize=1024%2C576&ssl=1)
![](https://i0.wp.com/nesaranewsworld.com/wp-content/uploads/2023/09/WhatsApp-Image-2023-06-19-at-2.49.48-PM.jpeg?resize=723%2C1024&ssl=1)
![](https://i0.wp.com/nesaranewsworld.com/wp-content/uploads/2023/09/WhatsApp-Image-2023-08-01-at-17.48.59.jpg?resize=719%2C687&ssl=1)
![](https://i0.wp.com/nesaranewsworld.com/wp-content/uploads/2023/09/WhatsApp-Image-2023-08-11-at-12.41.54-1.jpg?resize=714%2C1072&ssl=1)