ಉಜಿರೆ SDM ಕಾಲೇಜು NSS ಘಟಕಕ್ಕೆ, ಯೋಜನಾಧಿಕಾರಿ ಡಾ.ಲಕ್ಷ್ಮೀನಾರಾಯಣ ಕೆ.ಎಸ್ ರವರಿಗೆ NSS ರಾಜ್ಯ ಪ್ರಶಸ್ತಿ

ಶೇರ್ ಮಾಡಿ

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ರಾಷ್ಟ್ರೀಯ ಸೇವಾ ಯೋಜನೆ ಘಟಕಕ್ಕೆ 2021-22 ಸಾಲಿನ “ಅತ್ಯುತ್ತಮ NSS ಘಟಕ” ರಾಜ್ಯ ಪ್ರಶಸ್ತಿ ಹಾಗೂ ಯೋಜನಾಧಿಕಾರಿ ಡಾ.ಲಕ್ಷ್ಮೀನಾರಾಯಣ ಕೆ.ಎಸ್ ಅವರಿಗೆ “ಅತ್ಯುತ್ತಮ ರಾಷ್ಟ್ರೀಯ ಸೇವಾ ಯೋಜನೆ ಯೋಜನಾಧಿಕಾರಿ” ರಾಜ್ಯ ಪ್ರಶಸ್ತಿ ಲಭಿಸಿದೆ.

ಡಾ.ಲಕ್ಷ್ಮೀನಾರಾಯಣ ಕೆ.ಎಸ್ ಅವರು ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ನ ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕರು, ಜೂನ್ 2019ರಲ್ಲಿ ಯೋಜನಾಧಿಕಾರಿಯಾಗಿ ನೇಮಕಗೊಂಡು ಜೂನ್ 2023 ರವರೆಗೆ ಯೋಜನಾಧಿಕಾರಿಯಾಗಿ ಘಟಕ 1ನ್ನು ಮುನ್ನಡಿಸಿದ್ದಾರೆ.

ಇವರ ಅವಧಿಯಲ್ಲಿ ಮೂರು ವಾರ್ಷಿಕ ವಿಶೇಷ ಶಿಬಿರಗಳ ಆಯೋಜನೆ, ಕೊರೊನ ಕಾಲದಲ್ಲಿ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಕೋವಿಡ್ ಜಾಗೃತಿ, ಲಾಕ್ ಡೌನ್ ವಿಶೇಷ ಕಾರ್ಯಕ್ರಮಗಳು, ಕೋವಿಡ್ ಲಸಿಕಾ ಜಾಗೃತಿ ಹಾಗೂ ಲಸಿಕಾ ಶಿಬಿರಗಳ ಆಯೋಜನೆ, ಆಜಾದಿ ಕಾ ಅಮೃತ್ ಮಹೋತ್ಸವ ಅಂಗವಾಗಿ ಸ್ವಯಂಸೇವಕರೇ ಸಂಪನ್ಮೂಲ ವ್ಯಕ್ತಿಗಳಾಗಿ ಸ್ವತಂತ್ರ ಭಾರತದ ಸಾಧಕರು ಹಾಗೂ ಸ್ವತಂತ್ರ ಹೋರಾಟಗಾರ ಕುರಿತಾಗಿ 75 ವಿಶೇಷ ಉಪನ್ಯಾಸಗಳ ಸರಣಿ ಆಯೋಜನೆ, ಇಂಗು ಗುಂಡಿಗಳ ನಿರ್ಮಾಣ, ಸ್ವಚ್ಛ ಭಾರತ ಕಾರ್ಯಕ್ರಮಗಳ ಆಯೋಜನೆ, ಪರಿಸರ ಸಂಬಂಧಿ ಹಾಗೂ ಜಲ ಸಂರಕ್ಷಣೆಗೆ ಕುರಿತಾದ ಕಾರ್ಯಕ್ರಮಗಳ ಆಯೋಜನೆ ಇತ್ಯಾದಿ ಕಾರ್ಯಕ್ರಮಗಳನ್ನು ನಡೆಸಿದ್ದಾರೆ.
ಗಣರಾಜ್ಯೋತ್ಸವ ಪೆರೇಡ್ ನಲ್ಲಿ, ರಾಷ್ಟ್ರಮಟ್ಟದ ಹಾಗೂ ರಾಜ್ಯಮಟ್ಟದ ರಾಷ್ಟ್ರೀಯ ಭಾವೈಕ್ಯತೆ ಶಿಬಿರಗಳಲ್ಲಿ, ಯುವಜನೋತ್ಸವಗಳಲ್ಲಿ, ನಾಯಕತ್ವ ತರಬೇತಿ ಕಾರ್ಯಕ್ರಮಗಳಲ್ಲಿ ಸ್ವಯಂಸೇವಕರ ಪಾಲ್ಗೊಳ್ಳುವಿಕೆ ಇವರ ಅವಧಿಯಲ್ಲಿ ಆಗಿರುತ್ತದೆ.

ಬೆಂಗಳೂರಿನ ಬ್ಯಾಂಕ್ವೆಟ್ ಹಾಲ್ ರಾಜ್ಯಭವನದಲ್ಲಿ ಅಕ್ಟೋಬರ್ 11ರಂದು ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಪ್ರಶಸ್ತಿಯನ್ನು ಸ್ವೀಕರಿಸಲಿದ್ದಾರೆ.

ಪೂಜ್ಯ ಖಾವಂದರ ಆಶೀರ್ವಾದ, ಸಂಸ್ಥೆಯ ಆಡಳಿತ ಮಂಡಳಿಯ ಬೆಂಬಲ, ಕಾರ್ಯದರ್ಶಿಗಳು, ಪ್ರಾಂಶುಪಾಲರುಗಳು, ಹಿರಿಯ ಯೋಜನಾಧಿಕಾರಿಗಳು, ಹಿರಿಯ ಸ್ವಯಂಸೇವಕರು, ಈಗಿನ ಸ್ವಯಂಸೇವಕರು, ಅನೇಕ ಸಂಘ ಸಂಸ್ಥೆಗಳ ಮುಖಂಡರು, ಹಿರಿಯರು, ಊರವರ ಸಹಕಾರ ಈ ಸಾಧನೆಗೆ ಮೂಲ ಕಾರಣ ಎಂಬುದು ನನ್ನ ಭಾವನೆ. ನಮ್ಮ ಕಾಲೇಜಿನ ಘಟಕಕ್ಕೆ ಪ್ರಶಸ್ತಿ ಬಂದದ್ದು ವೈಯಕ್ತಿಕ ಪ್ರಶಸ್ತಿಗಿಂತಲೂ ಕೂಡ ನನಗೆ ಬಹಳ ಸಂತೋಷವನ್ನು ನೀಡಿದೆ.
-ಡಾ.ಲಕ್ಷ್ಮೀನಾರಾಯಣ ಕೆ.ಎಸ್

Leave a Reply

error: Content is protected !!