ಉಜಿರೆಯ ಎಸ್ ಡಿ ಎಂ ಕಾಲೇಜಿನ ಎನ್ನೆಸ್ಸೆಸ್ ಘಟಕಕ್ಕೆ ರಾಜ್ಯ ಪ್ರಶಸ್ತಿ

ಶೇರ್ ಮಾಡಿ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ ಹಾಗೂ ಕಾರ್ಯಕ್ರಮಾಧಿಕಾರಿ ಡಾ. ಲಕ್ಷ್ಮೀನಾರಾಯಣ ಕೆ. ಎಸ್ ಅವರಿಗೆ ಎನ್ನೆಸ್ಸೆಸ್ ರಾಜ್ಯ ಪ್ರಶಸ್ತಿ ಲಭಿಸಿದೆ.

ಬೆಂಗಳೂರಿನ ರಾಜ್ಯಪಾಲರ ರಾಜಭವನದಲ್ಲಿ ಜರುಗಿದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕಾಲೇಜಿನ ಪ್ರಿನ್ಸಿಪಾಲ್ ಡಾ.ಬಿ.ಎ.ಕುಮಾರ್ ಹೆಗ್ಡೆ ಹಾಗೂ ಡಾ.ಲಕ್ಷ್ಮೀನಾರಾಯಣ್ ಕೆ ಎಸ್ ಅವರು ಪ್ರಶಸ್ತಿ ಸ್ವೀಕರಿಸಿದರು.

ಡಾ.ಲಕ್ಷ್ಮೀನಾರಾಯಣ್ ಅವರು ಜೂನ್ 2019ರಿಂದ ಜೂನ್ 2023 ರವರೆಗೆ ಯೋಜನಾಧಿಕಾರಿಯಾಗಿ ಎನ್ನೆಸ್ಸೆಸ್ ಘಟಕ 1 ನ್ನು ಮುನ್ನಡಸಿದ್ದರು. ಈ ಅವಧಿಯಲ್ಲಿ ಮೂರು ವಾರ್ಷಿಕ ವಿಶೇಷ ಶಿಬಿರಗಳ ಆಯೋಜನೆ,ಕೊರೊನಾ ಕಾಲದಲ್ಲಿ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಕೋವಿಡ್ ಜಾಗೃತಿ, ಲಾಕ್ ಡೌನ್ ವಿಶೇಷ ಕಾರ್ಯಕ್ರಮಗಳು, ಕೋವಿಡ್ ಲಸಿಕಾ ಜಾಗೃತಿ ಹಾಗೂ ಲಸಿಕಾ ಶಿಬಿರಗಳ ಆಯೋಜನೆ,ಆಜಾದಿ ಕಾ ಅಮೃತ್ ಮಹೋತ್ಸವ ಅಂಗವಾಗಿ ಸ್ವಯಂಸೇವಕರೇ ಸಂಪನ್ಮೂಲ ವ್ಯಕ್ತಿಗಳಾಗಿ ಸ್ವತಂತ್ರ ಭಾರತದ ಸಾಧಕರು ಹಾಗೂ ಸ್ವತಂತ್ರ ಹೋರಾಟಗಾರ ಕುರಿತಾಗಿ 75 ವಿಶೇಷ ಉಪನ್ಯಾಸಗಳ ಸರಣಿ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು .

ಇದಲ್ಲದೆ ಇಂಗು ಗುಂಡಿಗಳ ನಿರ್ಮಾಣ, ಸ್ವಚ್ಛ ಭಾರತ ಕಾರ್ಯಕ್ರಮಗಳ ಆಯೋಜನೆ,ಪರಿಸರ ಸಂರಕ್ಷಣೆ ಸಂಬಂಧಿ‌ ಕಾರ್ಯಕ್ರಮಗಳು,ರಕ್ತದಾನ ಶಿಬಿರಗಳು, ಆರೋಗ್ಯ ಶಿಬಿರಗಳು, ಗದ್ದೆ ನಾಟಿ, ಚಾರ್ಮಾಡಿ ಯಲ್ಲಿ ಪ್ರವಾಹದ ಸಂದರ್ಭದಲ್ಲಿ ಪರಿಹಾರ ಕಾರ್ಯಗಳಲ್ಲಿ ಭಾಗಿ, ಜಲಸಂರಕ್ಷಣೆ ಜಾಗೃತಿ ಜಾಥಾಗಳು, ಮಾದಕ ವ್ಯಸನಿ ವಿರೋಧಿ ಕಾರ್ಯಕ್ರಮಗಳು, ಸಾಮಾಜಿಕ ಪ್ರಜ್ಞೆ ಜಾಗ್ರತಿ ಕಾರ್ಯಕ್ರಮಗಳು ಹಾಗೂ ಜಲ ಸಂರಕ್ಷಣೆಗೆ ಕುರಿತಾದ ಕಾರ್ಯಕ್ರಮಗಳ ಆಯೋಜನೆ, ಗಣರಾಜ್ಯೋತ್ಸವ ಪೆರೇಡ್ ನಲ್ಲಿ, ರಾಷ್ಟ್ರಮಟ್ಟದ ಹಾಗೂ ರಾಜ್ಯಮಟ್ಟದ ರಾಷ್ಟ್ರೀಯ ಭಾವೈಕ್ಯತೆ ಶಿಬಿರಗಳಲ್ಲಿ, ಯುವಜನೋತ್ಸವಗಳಲ್ಲಿ, ನಾಯಕತ್ವ ತರಬೇತಿ ಕಾರ್ಯಕ್ರಮಗಳನ್ನು ಸಂಘಟಿಸಲಾಗಿತ್ತು.

Leave a Reply

error: Content is protected !!