ನ್ಯಾಯತರ್ಪು : ಸಿಡಿಲು ಬಡಿದು 3 ಮನೆಗಳಿಗೆ ಹಾನಿ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ

ಶೇರ್ ಮಾಡಿ

ನ್ಯಾಯತರ್ಪು : ಅ.12 ರಂದು ಭಾರೀ ಮಳೆ ಸುರಿದ ಸಂದರ್ಭದಲ್ಲಿ ನ್ಯಾಯತರ್ಪು ಗ್ರಾಮದ 3 ಮನೆಗಳಿಗೆ ಸಿಡಿಲು ಬಡಿದು ಮನೆಗಳಿಗೆ ಹಾನಿ ಉಂಟಾಗಿತ್ತು.

ನಾಳ ದೇವಿ ನಗರ ಶಂಕರ ಶೆಟ್ಟಿ, ಕೃಷ್ಣಪ್ಪ ಪೂಜಾರಿ ಮತ್ತು ಅಂಬಿಕಾ ಇವರ ಮನೆಗೆ ಸಿಡಿಲು ಬಡಿದಿದ್ದು ಅ.13ರಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಸದಸ್ಯರಾದ ಹರೀಶ್ ಕುಮಾರ್, ಅಬ್ದುಲ್ ಲತೀಪ್, ಮಾಜಿ ಪಂಚಾಯತ್ ಉಪಾಧ್ಯಕ್ಷರಾದ ಸತೀಶ್ ನಾಳ, ಹಾಗೂ ಸ್ಥಳೀಯರು ಜೊತೆಗಿದ್ದರು.

Leave a Reply

error: Content is protected !!