ಹುಲಿ ಉಗುರು ಕೇಸ್​ನಲ್ಲಿ ಜೈಲು ಸೇರಿದ್ದ ಬಿಗ್​ ಬಾಸ್​ ಸ್ಪರ್ಧಿ ವರ್ತೂರು ಸಂತೋಷ್​ಗೆ ಸಿಕ್ತು ಜಾಮೀನು

ಶೇರ್ ಮಾಡಿ

ಹುಲಿ ಉಗುರು ಧರಿಸಿದ್ದ ಆರೋಪದ ಮೇಲೆ ಬಂಧನಕ್ಕೆ ಒಳಗಾಗಿದ್ದ ‘ಬಿಗ್​ ಬಾಸ್​ ಕನ್ನಡ ಸೀಸನ್​ 10’ ರಿಯಾಲಿಟಿ ಶೋ ಸ್ಪರ್ಧಿ ವರ್ತೂರು ಸಂತೋಷ್​ ಅವರಿಗೆ ಈಗ ಜಾಮೀನು ಸಿಕ್ಕಿದೆ.

ಇಷ್ಟು ದಿನಗಳ ಕಾಲ ಅವರು ನ್ಯಾಯಾಂಗ ಬಂಧನದಲ್ಲಿ ಇದ್ದರು. ಸದ್ಯಕ್ಕೆ ಅವರಿಗೆ ಬಿಗ್ ರಿಲೀಫ್​ ಸಿಕ್ಕಂತಾಗಿದೆ. ಬೆಂಗಳೂರಿನ 2ನೇ ಎಸಿಜೆಎಂ ನ್ಯಾಯಾಲಯದಿಂದ ಜಾಮೀನು ನೀಡಲಾಗಿದೆ.

4 ಸಾವಿರ ರೂಪಾಯಿ ನಗದು ಭದ್ರತೆ ಅಥವಾ ಒಬ್ಬರ ಶ್ಯೂರಿಟಿ ಒದಗಿಸುವಂತೆ ಷರತ್ತು ಹಾಕಲಾಗಿದೆ. ಇಂದು (ಅಕ್ಟೋಬರ್​ 27) ಸಂಜೆ ವೇಳೆಗೆ ವರ್ತೂರು ಸಂತೋಷ್ ಬಿಡುಗಡೆ ಆಗಲಿದ್ದಾರೆ. ಮತ್ತೆ ಅವರು ಬಿಗ್​ ಬಾಸ್​ನಲ್ಲಿ ಸ್ಪರ್ಧಿಸುತ್ತಾರಾ ಎಂಬ ಕೌತುಕ ಮೂಡಿದೆ.

Leave a Reply

error: Content is protected !!