ಹೊಸ ಪಡಿತರ ಕಾರ್ಡ್​​ ವಿತರಣೆಗೆ ಆಹಾರ ಇಲಾಖೆ ಗ್ರೀನ್ ಸಿಗ್ನಲ್: ಪಡೆಯುವುದು ಹೇಗೆ? ಇಲ್ಲಿದೆ ಮಾಹಿತಿ

ಶೇರ್ ಮಾಡಿ

ಪಡಿತರದಾರಿಗೆ ಆಹಾರ ಇಲಾಖೆಯಿಂದ ಸಿಹಿ ಸುದ್ದಿ ನೀಡಿದೆ. ಬಾಕಿ ಉಳಿದಿದ್ದ ಪಡಿತರ ಕಾರ್ಡ್​​​ಗಳನ್ನು ಇಂದಿನಿಂದ ನವೆಂಬರ್​ 20ನೇ ತಾರೀಖಿನವರೆಗೂ ವಿತರಿಸಲಾಗುತ್ತದೆ. ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ 2.96 ಲಕ್ಷ ಪಡಿತರ ಕಾರ್ಡ್​​ಗಳು ವಿತರಣೆಗೆ ಬಾಕಿ ಉಳಿದಿದ್ದವು. ಈ ಕಾರ್ಡ್​ಗಳನ್ನು ಸದ್ಯ ಪರಿಶೀಲಿಸಲಾಗಿದ್ದು 2.96 ಲಕ್ಷ ಕಾರ್ಡ್​​ಗಳ ಪೈಕಿ 2.78 ಕಾರ್ಡ್​ಗಳ ಪರಿಶೀಲನೆ ನಡೆದಿದೆ. ದಾಖಾಲೆಗಳು ಸರಿ ಇಲ್ಲದ ಕಾರಣ 50 ಸಾವಿರ ಕಾರ್ಡ್​ಗಳನ್ನ ರದ್ದುಪಡಿಸಲಾಗಿದೆ. ಸದ್ಯ 2 ಲಕ್ಷದ 28 ಸಾವಿರ ಕಾರ್ಡ್​ಗಳಿಗೆ ಮಾತ್ರ ಅನುಮತಿ ನೀಡಲಾಗಿದೆ. ಈ ಕಾರ್ಡ್​ಗಳನ್ನು ಆಹಾರ ಇಲಾಖೆ ಇಂದಿನಿಂದ ವಿತರಿಸುತ್ತಿದೆ.

ಕಾರ್ಡ್​ ಪಡೆಯುವುದು ಹೇಗೆ?
ಪಡಿತರ ಕಾರ್ಡ್​ದಾರರಿಗೆ ಆಹಾರ ಇಲಾಖೆಯಿಂದ ಸಂದೇಶ ರಾವಾನಿಸಲಾಗಿದ್ದು, ಒಟಿಪಿ ನಂಬರ್ ಪಡೆದು ತಾವೇ ಗೂಗಲ್​ನಲ್ಲಿ ಕಾರ್ಡ್​ಗಳನ್ನು ಡೌನ್ ಲೋಡ್ ಮಾಡಿಕೊಳ್ಳಬಹುದಾಗಿದೆ. ಬೆಳ್ಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೂ ಅಪ್ರುವಲ್​ಗೆ ಅವಕಾಶ ನೀಡಲಾಗಿದೆ ಎಂದು ಆಹಾರ ಇಲಾಖೆ ಪ್ರಕಟಣೆ ಹೊರಡಿಸಿದೆ.

ಪಡಿತರ ಪಡೆಯದವರ ಬಿಪಿಎಲ್ ಕಾರ್ಡ್ ರದ್ದುಪಡಿಸುವುದಿಲ್ಲ: ಮುನಿಯಪ್ಪ
ಪಡಿತರ ಪಡೆಯದವರ ಬಿಪಿಎಲ್ ಕಾರ್ಡ್​​ ಅನ್ನು ರದ್ದುಪಡಿಸುವುದಿಲ್ಲ, ಬದಲಾಗಿ ಆರೋಗ್ಯ ಯೋಜನೆಗಳಿಗೆ ಕಾರ್ಡ್​ಗಳನ್ನು ಬಳಸಲು ಅವಕಾಶವಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ ಸ್ಪಷ್ಟಪಡಿಸಿದರು.

ಕಳೆದ ಒಂದು ವರ್ಷದಿಂದ ಹೊಸ ಕಾರ್ಡ್​ಗಳನ್ನು ವಿತರಿಸಿಲ್ಲ. ಇದೀಗ ಹೊಸದಾಗಿ ಸುಮಾರು 2.95 ಲಕ್ಷ ಕಾರ್ಡ್​ಗಳನ್ನು ನೀಡಲು ತೀರ್ಮಾನಿಸಲಾಗಿದೆ. ಇವುಗಳಲ್ಲಿ ಹೆಚ್ಚಿನವು ಬಿಪಿಎಲ್​ ಕಾರ್ಡ್​ಗಳಿವೆ. ಸರಿಯಾದ ಪರಿಶೀಲನೆಯೊಂದಿಗೆ, ಕಾರ್ಡ್‌ಗಳ ವಿತರಣೆಗೆ ಇಂದಿನಿಂದ (ಶುಕ್ರವಾರ) ಅನುಮೋದನೆಯನ್ನು ನೀಡಲಾಗುತ್ತಿದೆ. ಪಡಿತರ ಪಡೆಯದವರೂ ಕೂಡ ಆರೋಗ್ಯ ಯೋಜನೆಗಳಿಗೆ ಕಾರ್ಡ್​ ಅನ್ನು ಬಳಸಿಕೊಳ್ಳಲು ಅನುಮತಿಸಲಾಗಿದೆ ಎಂದು ತಿಳಿಸಿದರು.

ಶೇಕಡಾ 95 ಕ್ಕಿಂತ ಹೆಚ್ಚು ಬಿಪಿಎಲ್ ಕಾರ್ಡ್ ಹೊಂದಿರುವವರು 5 ಕೆಜಿ ಅಕ್ಕಿಗೆ ಬದಲಾಗಿ ಹಣವನ್ನು ಪಡೆಯುತ್ತಿದ್ದಾರೆ. ರಾಜ್ಯದಲ್ಲಿ 1.08 ಕೋಟಿ ಬಿಪಿಎಲ್ ಕಾರ್ಡ್‌ಗಳಿದ್ದು, 1.03 ಕೋಟಿ ಬಿಪಿಎಲ್​ ಕಾರ್ಡ್​​​ದಾರರು 170 ರೂಪಾಯಿ ಪಡೆಯುತ್ತಿದ್ದಾರೆ. ಮತ್ತು ಒಂದು ಕುಟುಂಬ ಒಂದಕ್ಕಿಂತ ಹೆಚ್ಚು ಬಿಪಿಎಲ್ ಕಾರ್ಡ್ ಹೊಂದಿರುವಂತಹ ಅಕ್ರಮವನ್ನು ಪತ್ತೆ ಹಚ್ಚಲಾಗುತ್ತಿದೆ ಎಂದರು.

ಬಿಪಿಎಲ್ ಕುಟುಂಬಗಳಿಗೆ ತಿಂಗಳಿಗೆ ತಲಾ 10 ಕೆಜಿ ಅಕ್ಕಿ ನೀಡುವ ‘ಅನ್ನ ಭಾಗ್ಯ’ ಯೋಜನೆಗೆ ಅಗತ್ಯವಿರುವ ಹೆಚ್ಚುವರಿ ಅಕ್ಕಿಯನ್ನು ನೀಡಲು ನಿರಾಕರಿಸುವ ಮೂಲಕ ಕೇಂದ್ರ ಸರ್ಕಾರ ರಾಜಕೀಯ ಮಾಡುತ್ತಿದೆ. ಆಂಧ್ರಪ್ರದೇಶ, ಛತ್ತೀಸ್‌ಗಢ ಮತ್ತು ಇತರ ರಾಜ್ಯಗಳಿಂದ ಅಕ್ಕಿ ಕೊಂಡುಕೊಳ್ಳಲು ಪ್ರಯತ್ನಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಫಲಾನುಭವಿಗಳಿಗೆ ನೇರವಾಗಿ ಹಣ ನೀಡುತ್ತಿರುವುದರಿಂದ ನ್ಯಾಯಬೆಲೆ ಅಂಗಡಿ ನಿರ್ವಾಹಕರ ಕಮಿಷನ್​ಗೆ ಕತ್ತರಿ ಬಿದ್ದಿದೆ ಎಂಬ ವಿಚಾರವಾಗಿ ಮಾತನಾಡಿದ ಅವರು ನಾವು ಹೆಚ್ಚುವರಿ ಅಕ್ಕಿ ನೀಡಲು ಪ್ರಾರಂಭಿಸಿದಾಗ ಕಮಿಷನ್​ ಸಿಗುತ್ತದೆ. ಅರ್ಹರಿಗೆ ಅಕ್ಕಿ ಸಿಗಲಿದ್ದು, ಪಡಿತರ ಅಕ್ಕಿಯನ್ನು ಕಾಳಸಂತೆಯಲ್ಲಿ ಮಾರಾಟ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು.

Leave a Reply

error: Content is protected !!