ವಸತಿ ಯೋಜನೆಯಡಿ ತಾಂತ್ರಿಕ ಕಾರಣಗಳಿಂದಾಗಿ ತಡೆಹಿಡಿದಿರುವ ಫಲಾನುಭವಿಗಳ ಅನುದಾನವನ್ನು ಬಿಡುಗಡೆಗೊಳಿಸುವ ಕುರಿತು ವ್ಯವಸ್ಥಾಪಕ ನಿರ್ದೇಶಕರಿಗೆ ಸುಳ್ಯ ಶಾಸಕರಿಂದ ಮನವಿ

ಶೇರ್ ಮಾಡಿ

ಸುಳ್ಯ ವಿಧಾನಸಭಾ ಕ್ಷೇತ್ರದ ಸುಳ್ಯ ಮತ್ತು ಕಡಬ ತಾಲೂಕಿನ ವ್ಯಾಪ್ತಿಯಲ್ಲಿ ವಿವಿಧ ವಸತಿ ಯೋಜನೆಯಡಿ ಆಯ್ಕೆಯಾದ ಫಲಾನುಭವಿಗಳ ಸಹಾಯಧನವನ್ನು ವಿವಿಧ ತಾಂತ್ರಿಕ ಕಾರಣದಿಂದಾಗಿ ನಿಗಮದಿಂದ ತಡೆ ಹಿಡಿಯಲಾಗಿದ್ದು ಸದರಿ ಸಮಸ್ಯೆಯನ್ನು ಬಗೆಹರಿಸಿ ಅನುದಾನವನ್ನು ಬಿಡುಗಡೆಗೊಳಿಸುವಂತೆ ಹಲವಾರು ಬಾರಿ ಕೋರಲಾಗಿದ್ದರು ನಿಗಮದ ವತಿಯಿಂದ ಸಮಸ್ಯೆಯನ್ನು ಇವರಿಗೂ ಬಗೆಹರಿಸಿರುವುದಿಲ್ಲ. ಆದ್ದರಿಂದ ಸಮಸ್ಯೆಯನ್ನು ಪರಿಹರಿಸಿ ಫಲಾನುಭವಿಗಳಿಗೆ ಅನುದಾನ ಬಿಡುಗಡೆಗೊಳಿಸಬೇಕೆಂದು ಸುಳ್ಯ ಶಾಸಕರಾದ ಭಾಗೀರಥಿ ಮುರುಳ್ಯ ರವರು ರಾಜೀವ್ ಗಾಂಧಿ ಗ್ರಾಮೀಣ ವಸತಿ ನಿಗಮ ಇದರ ವ್ಯವಸ್ಥಾಪಕ ನಿರ್ದೇಶಕರಿಗೆ ಬೆಂಗಳೂರಿನಲ್ಲಿ ಮನವಿಯನ್ನು ಸಲ್ಲಿಸಿದರು.

Leave a Reply

error: Content is protected !!