ನೆಲ್ಯಾಡಿ: ತಾಲೂಕು ಮಟ್ಟದ ಸ್ವಾಸ್ಥ್ಯ ಸಂಕಲ್ಪ ಮಾಹಿತಿ ಕಾರ್ಯಗಾರ

ಶೇರ್ ಮಾಡಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಕಡಬ,ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಬೆಳ್ತಂಗಡಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಕಡಬ, ಇವುಗಳ ಸಹಯೋಗದೊಂದಿಗೆ “ಶ್ರೀ ರಾಮ ವಿದ್ಯಾಲಯ ಸೂರ್ಯನಗರ” ನೆಲ್ಯಾಡಿಯಲ್ಲಿ ಪ್ರೌಢ ಶಾಲಾ ವಿಧ್ಯಾರ್ಥಿ, ವಿಧ್ಯಾರ್ಥಿನಿಯರಿಗಾಗಿ ತಾಲೂಕು ಮಟ್ಟದ ಸ್ವಾಸ್ಥ್ಯ ಸಂಕಲ್ಪ 2023 ಇದರ ಭಾಗವಾಗಿ ಮಾಹಿತಿ ಕಾರ್ಯಗಾರವು ನಡೆಯಿತು.

ಸಂಪನ್ಮೂಲ ವ್ಯಕ್ತಿಯಾದ ನೆಲ್ಯಾಡಿ ಸೈಂಟ್ ಜಾರ್ಜ್ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಾದ ಚೇತನ್ ಆನೆಗುಂಡಿ ಇವರು ಮಾತನಾಡುತ್ತಾ ದುಷ್ಟ ಚಟಗಳ ಸಹವಾಸದಿಂದ ಅನೇಕ ಜನರು ಆರೋಗ್ಯ ನೆಮ್ಮದಿಯನ್ನು ಕಳೆದುಕೊಂಡಿದ್ದಾರೆ. ವಿಧ್ಯಾರ್ಥಿಗಳು ಇಂತಹ ಕೆಟ್ಟ ಆಕರ್ಷಣೆಗಳಿಂದ ದೂರವಿದ್ದು,ಸ್ವಸ್ಥ ಸಮಾಜವನ್ನು ಕಟ್ಟುವಲ್ಲಿ ಶ್ರಮಿಸಬೇಕು ಎಂದು ಹೇಳಿದರು.

ನೆಲ್ಯಾಡಿ ಶ್ರೀ ರಾಮ ವಿದ್ಯಾಲಯ ಸೂರ್ಯನಗರ ಇಲ್ಲಿಯ ಮುಖ್ಯೋಪಾಧ್ಯಾಯರಾದ ಗಣೇಶ್ ವಾಗ್ಲೆ ಅಧ್ಯಕ್ಷತೆ ವಹಿಸಿದ್ದರು. ಜನಜಾಗೃತಿ ವೇದಿಕೆ ನೆಲ್ಯಾಡಿ ವಲಯದ ಅಧ್ಯಕ್ಷರಾದ ಜಯಾನಂದ ಬಂಟ್ರಿಯಾಲ್, ನೆಲ್ಯಾಡಿ ವಲಯ ಮೇಲ್ವಿಚಾರಕರಾದ ವಿಜೇಶ್ ಜೈನ್, ಜನಜಾಗೃತಿ ಸದಸ್ಯರಾದ ತುಕಾರಾಮ ರೈ, ನೆಲ್ಯಾಡಿ ಒಕ್ಕೂಟದ ಅಧ್ಯಕ್ಷರಾದ ಭಾಸ್ಕರ ಶೆಟ್ಟಿ, ಕೌಕ್ರಾಡಿ ಒಕ್ಕೂಟದ ಅಧ್ಯಕ್ಷರಾದ ಬಾಲಕೃಷ್ಣ ಗೌಡರವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ವಲಯ ಮೇಲ್ವಿಚಾರಕರಾದ ವಿಜೇಶ್ ಜೈನ್ ಸ್ವಾಗತಿಸಿದರು. ಶ್ರೀ ರಾಮ ವಿದ್ಯಾಲಯದ ಶಿಕ್ಷಕಿ ಭಾಗೀರಥಿ ನಿರೂಪಿಸಿ, ಶಿಕ್ಷಕಿ ಅಶ್ವಿನಿಯವರು ಧನ್ಯವಾದ ಸಮರ್ಪಿಸಿದರು. ಸೇವಾಪ್ರತಿನಿಧಿಗಳಾದ ನಮಿತಾ ಎಸ್ ಶೆಟ್ಟಿ ಮತ್ತು ಸುಮನ ಎಸ್ ಕಾರ್ಯಕ್ರಮಕ್ಕೆ ಸಹಕರಿಸಿದರು.

Leave a Reply

error: Content is protected !!