ಕರ್ನಾಟಕ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ ರಜನೀಶ್ ಗೋಯಲ್ ನೇಮಕ

ಶೇರ್ ಮಾಡಿ

ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ಹಿರಿಯ ಐಎಎಸ್ ಅಧಿಕಾರಿ ರಜನೀಶ್ ಗೋಯಲ್ ಅವರು ನೇಮಕಗೊಂಡಿದ್ದಾರೆ. ರಣದೀಪ್ ಸಿಂಗ್ ಸುರ್ಜೇವಾಲ ಜೊತೆಗೆ ಸಭೆ ನಡೆಯುತ್ತಿರುವ ನಡುವೆ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾದ ಕೆಲವೇ ಕ್ಷಣಗಳಲ್ಲಿ ಸಿಎಸ್ ಆಗಿ ನೇಮಕಗೊಂಡಿದ್ದಾರೆ.

ಮುಖ್ಯ ಕಾರ್ಯದರ್ಶಿಯನ್ನಾಗಿ ನೇಮಕ ಮಾಡುವ ಮುನ್ನ ಗೋಯಲ್ ಅವರು ತಾಜ್​ವೆಸ್ಟ್ ಎಂಡ್ ಹೊಟೇಲ್​ನಲ್ಲಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದರು. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಜೊತೆ ನಡೆಯುತ್ತಿದ್ದ ಸಭೆ ನಡುವೆ ಗೋಯಲ್ ಈ ಭೇಟಿ ಮಾಡಿದ್ದರು.

ಪ್ರಸ್ತುತ ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿರುವ ರಜನೀಶ್ ಗೋಯಲ್ ಅವರು ಡಿಸೆಂಬರ್ 1 ರಂದು ಅಧಿಕಾರ ಸ್ವೀಕರಿಸಲಿದ್ದಾರೆ. ಇವರು 1986ರ ಬ್ಯಾಚ್​ನ ಐಎಎಸ್ ಅಧಿಕಾರಿಯಾಗಿದ್ದಾರೆ. ಪ್ರಸ್ತುತ ಮುಖ್ಯ ಕಾರ್ಯದರ್ಶಿಯಾಗಿರುವ ವಂದಿತಾ ಶರ್ಮಾ ಅವರು ಅಧಿಕಾರಾವಧಿ ನವೆಂಬರ್ 30 ರಂದು ಕೊನೆಗೊಳ್ಳಲಿದೆ.

Leave a Reply

error: Content is protected !!