![](https://i0.wp.com/nesaranewsworld.com/wp-content/uploads/2023/11/shivamogga-drunk-man-pours-boiling-oil-on-college-student.webp?resize=1024%2C576&ssl=1)
ಕಾಲೇಜು ವಿದ್ಯಾರ್ಥಿ ಮೇಲೆ ಕುದಿಯುವ ಎಣ್ಣೆಯನ್ನೇ ಕುಡುಕನೊಬ್ಬ ಎರಚಿದ ಘಟನೆ ಶಿವಮೊಗ್ಗ ದ ರಾಯಲ್ ಆರ್ಕೆಡ್ ಎದುರು ನಡೆದಿದೆ.
ಕಬಾಬ್ ಅಂಗಡಿ ಮಾಲೀಕನ ಜೊತೆ ಜಗಳವಾಡುತ್ತಿದ್ದ ವೇಳೆ ರೊಚ್ಚಿಗೆದ್ದ ಪಾನಮತ್ತ ವ್ಯಕ್ತಿ, ಮಾಲೀಕನ ಮೇಲೆ ಎಣ್ಣೆ ಎರಚಲು ಯತ್ನಿಸಿದ್ದಾನೆ. ಈ ವೇಳ ವಿದ್ಯಾರ್ಥಿ ಮೇಲೆ ಎಣ್ಣೆ ಎರಚಿದ್ದು, ಮೈಮೇಲೆ ಬಿಸಿ ಎಣ್ಣೆ ಬಿದ್ದಿದ್ದರಿಂದ ವಿದ್ಯಾರ್ಥಿ ಧನುಷ್ಗೆ ಬೊಬ್ಬೆ ಬಂದಿದೆ. ಕೂಡಲೇ ಗಾಯಾಳು ವಿದ್ಯಾರ್ಥಿ ಹಾಗೂ ಕುಡುಕನಿಗೆ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆಂದು ಕರೆದೊಯ್ಯಲಾಯಿತು.
ಕುಡುಕನ ಅವಾಂತರ
ಇನ್ನು ಕುಡುಕನ ಕಿರಿಕ್ ಹೆಚ್ಚುತ್ತಿದ್ದಂತೆ ಈ ಬಗ್ಗೆ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸ್ ವಾಹನದ ಕೆಳಗೆ ಪಾನಮತ್ತ ವ್ಯಕ್ತಿ ನುಸುಳಿ ಕೆಲಹೊತ್ತು ಪೊಲೀಸರನ್ನು ಕಾಡಿದ್ದಾನೆ. ನಂತರ ಆ್ಯಂಬುಲೆನ್ಸ್ ಮೂಲಕ ಪೊಲೀಸರು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಈ ಕುರಿತು ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
![](https://i0.wp.com/nesaranewsworld.com/wp-content/uploads/2023/11/WhatsApp-Image-2023-11-09-at-12.16.18-PM-3.jpeg?resize=724%2C1024&ssl=1)
![](https://i0.wp.com/nesaranewsworld.com/wp-content/uploads/2023/11/WhatsApp-Image-2023-09-29-at-10.07.05-1.jpg?resize=724%2C1024&ssl=1)
![](https://i0.wp.com/nesaranewsworld.com/wp-content/uploads/2023/09/WhatsApp-Image-2023-06-19-at-2.49.48-PM-1.jpeg?resize=723%2C1024&ssl=1)