ಶಿಕ್ಷಕರ ಸಹಪಠ್ಯ ಚಟುವಟಿಕೆಗಳ ಸ್ಪರ್ಧೆಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕರಿಗೆ ಪ್ರಶಸ್ತಿ

ಶೇರ್ ಮಾಡಿ

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ರಾಷ್ಟ್ರೀಯ ಶಿಕ್ಷಕರ ಕಲ್ಯಾಣ ಪ್ರತಿಷ್ಠಾನ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಪುತ್ತೂರು, ಕ್ಷೇತ್ರ ಸಂಪನ್ಮೂಲ ಕೇಂದ್ರ ನೆಲ್ಲಿಕಟ್ಟೆ, ಪುತ್ತೂರು, ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ, ತೆಂಕಿಲ, ಇದರ ಜಂಟಿ ಆಶ್ರಯದಲ್ಲಿ ಶಿಕ್ಷಕರ ಸಹಪಠ್ಯ ಚಟುವಟಿಕೆಗಳ ಸ್ಪರ್ಧೆಯು ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ, ತೆಂಕಿಲ, ಇಲ್ಲಿ ನಡೆಯಿತು. ಸ್ಪರ್ಧೆಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕರು ಭಾಗವಹಿಸಿದ್ದು, ಪ್ರಶಸ್ತಿಗಳನ್ನು ಪಡೆದುಕೊಂಡಿರುತ್ತಾರೆ.

ಜನಪದಗೀತೆ ಸ್ಪರ್ಧೆಯಲ್ಲಿ ಶ್ರೀಮತಿ ರೇಷ್ಮಾ.ಟಿ ದ್ವಿತೀಯ ಸ್ಥಾನ, ಪ್ರೌಢಶಾಲಾ ವಿಭಾಗದ ಬೋಧನೋಪಕರಣ ತಯಾರಿಕಾ ಸ್ಪರ್ಧೆಯಲ್ಲಿ ಶ್ರೀಮತಿ ರೇಖಾ ಆಚಾರ್ಯ ದ್ವಿತೀಯ ಸ್ಥಾನ, ಪ್ರಾಥಮಿಕ ಶಾಲಾ ವಿಭಾಗದ ಆಶುಭಾಷಣ ಸ್ಪರ್ಧೆಯಲ್ಲಿ ಶ್ರೀಮತಿ ಸೌಮ್ಯಕುಮಾರಿ ತೃತೀಯ ಸ್ಥಾನ, ಮತ್ತು ಪ್ರಾಥಮಿಕ ಶಾಲಾ ವಿಭಾಗದ ಬೋಧನೋಪಕರಣ ತಯಾರಿಕಾ ಸ್ಪರ್ಧೆಯಲ್ಲಿ ಕು.ಅಕ್ಷತಾ.ಜಿ ತೃತೀಯ ಸ್ಥಾನ ಪಡೆದುಕೊಂಡಿರುತ್ತಾರೆ ಎಂದು ಶಾಲಾ ಮುಖ್ಯೋಪಾಧ್ಯಾಯರು ಶಾಲಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Leave a Reply

error: Content is protected !!