ಕಾಡಾನೆಗಳ ದಾಳಿಗೆ ಅಪಾರ ಕೃಷಿ ನಾಶ

ಶೇರ್ ಮಾಡಿ

ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮದ ಬೊಳ್ಳಾಜೆ ಭಾಗದಲ್ಲಿ ಜ.8ರಂದು ರಾತ್ರಿ ಕಾಡಾನೆಗಳ ದಾಳಿಗೆ ಅಪಾರ ಕೃಷಿ ನಾಶಗೊಂಡಿದೆ.

ಸತ್ಯಾನಂದ ಗೌಡ ಬೊಳ್ಳಾಜೆ ಎಂಬವರ ಅಡಕೆ ತೋಟಕ್ಕೆ ಕಾಡಾನೆ ದಾಳಿ ನಡೆಸಿದ್ದು ನೂರಾರು ಅಡಕೆ ಮರಗಳನ್ನು ನಾಶಗೊಳಿಸಿವೆ. ಸ್ಥಳಕ್ಕೆ ಸುಬ್ರಹ್ಮಣ್ಯ ವಲಯ ಅರಣ್ಯಾಧಿಕಾರಿ ವಿಮಲ್‌ಬಾಬು, ಪಂಜ ವಲಯ ಅರಣ್ಯಾಧಿಕಾರಿ ಗಿರೀಶ್ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಪ್ರದೇಶದಲ್ಲಿ ಕಾಡಾನೆಗಳ ದಾಂಧಲೆಗೆ ರೈತರು ಕಣ್ಣೀರು ಹಾಕುವಂತಾಗಿದ್ದು, ಅರಣ್ಯ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಳೆದ ಕೆಲವು ವರ್ಷದಿಂದ ನಿರಂತರವಾಗಿ ಅರಣ್ಯ ಪ್ರದೇಶದ ಪಕ್ಕದ ತೋಟಗಳಿಗೆ ಆನೆಗಳು ದಾಳಿ ಮಾಡುವ ಮೂಲಕ ಬೆಳೆಗಳನ್ನು ನಾಶ ಮಾಡುತ್ತಿವೆ. ಕಷ್ಟಪಟ್ಟು ಬೆಳೆದ ಅಡಕೆ, ಬಾಳೆ, ತೆಂಗು ಬೆಳೆಯನ್ನು ಕಾಡಾನೆಗಳು ನಾಶ ಮಾಡುತ್ತಿದ್ದು, ಅರಣ್ಯ ಅಧಿಕಾರಿಗಳಿಗೆ ಮನವಿ ಮಾಡಿದ್ದರು. ಯಾವುದೇ ಪ್ರಯೋಜನವಾಗಿಲ್ಲ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಲಕ್ಷಾಂತರ ರೂ. ಮೌಲ್ಯದ ಬೆಳೆಗಳು ನಾಶವಾಗುತ್ತಿದೆ ಎಂದು ತೋಟದ ಮಾಲೀಕರು ಕಣ್ಣೀರು ಹಾಕುತ್ತಿದ್ದಾರೆ.

ಪದೇ ಪದೆ ಕಾಡು ಪ್ರಾಣಿಗಳ ದಾಳಿಗೆ ಬೇಸತ್ತು ಹೋದ ರೈತರು ಹತ್ತು ಹಲವು ಬಾರಿ ಅರಣ್ಯ ಇಲಾಖೆ ಸಿಬ್ಬಂದಿಗೆ ಮನವಿ ಮಾಡಿ ಗಮನಕ್ಕೆ ತಂದರು ಯಾವುದೇ ಪ್ರಯೋಜನವಾಗುತ್ತಿಲ್ಲ. ಸರ್ಕಾರ ಈ ಬಗ್ಗೆ ಗಂಭೀರವಾಗಿ ಆಲೋಚನೆ ಮಾಡಿ, ಕಾಡಾನೆಗಳ ಹಾವಳಿಗೆ ಬ್ರೇಕ್ ಬೇಕಾಗಿದೆ.

Leave a Reply

error: Content is protected !!