ನೆಲ್ಯಾಡಿ ಸಂತ ಜಾರ್ಜ್ ಪ. ಪೂರ್ವ ಕಾಲೇಜಿನಲ್ಲಿ ಯುವ ಸಪ್ತಾಹ ಕಾರ್ಯಕ್ರಮ

ಶೇರ್ ಮಾಡಿ

ನೆಲ್ಯಾಡಿ: ಇಲ್ಲಿನ ಸಂತ ಜಾರ್ಜ್ ಪ.ಪೂರ್ವ ಕಾಲೇಜಿನ ಎನ್ಎಸ್ಎಸ್ ಘಟಕದ ವತಿಯಿಂದ ವಿವೇಕ ಜಯಂತಿ ರಾಷ್ಟ್ರೀಯ ಯುವ ದಿನದ ಅಂಗವಾಗಿ ಯುವ ಸಪ್ತಾಹ ಕಾರ್ಯಕ್ರಮ ಜ.12ರಂದು ಸಂಸ್ಥೆಯ ಸಂಚಾಲಕರಾದ ರೆ.ಫಾ.ನೋಮಿಸ್ ಕೊರಿಯಾಕೋಸ್ ರವರ ಮಾರ್ಗದರ್ಶನದಲ್ಲಿ ಆರಂಭಗೊಂಡಿತು.

ಬೆಥನಿ ಕೈಗಾರಿಕಾ ತರಬೇತಿ ವಿದ್ಯಾಸಂಸ್ಥೆಯ ಉಪನ್ಯಾಸಕರಾದ ಜೋನ್ ಪಿ.ಎಸ್. ರವರು ದೀಪ ಬೆಳಗಿಸುವ ಮೂಲಕ ಯುವ ಸಪ್ತಾಹವನ್ನು ಉದ್ಘಾಟಿಸಿ ಮಾತನಾಡಿದ ಅವರು ಯುವ ಜನತೆ ಸ್ವಾಮಿ ವಿವೇಕಾನಂದರ ಆದರ್ಶಗಳನ್ನು ಮೈಗೂಡಿಸಿಕೊಂಡು ವಿದ್ಯಾಭ್ಯಾಸದ ಜೊತೆಗೆ ಸಮಾಜಮುಖಿ ಸೇವಾ ಕಾರ್ಯಗಳನ್ನು ಕೈಗೊಳ್ಳುವುದರ ಮೂಲಕ ದೇಶದ ಭವಿಷ್ಯದ ಭದ್ರತೆಯನ್ನು ಬಲಪಡಿಸಬೇಕಾಗಿ ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಚಾರ್ಯರಾದ ಏಲಿಯಾಸ್.ಎಂ.ಕೆ. ರವರು ವಿದ್ಯಾರ್ಥಿಗಳು ಮಾದಕ ದ್ರವ್ಯ ವ್ಯಸನಗಳಿಗೆ ಬಲಿಯಾಗದಂತೆ ಎಚ್ಚರವಹಿಸಿ ಎನ್ಎಸ್ಎಸ್ ವಿದ್ಯಾರ್ಥಿಗಳು ಇತರರಿಗೆ ಮಾದರಿಯಾಗಿ ಇರಬೇಕೆಂದು ನುಡಿದರು. ವೇದಿಕೆಯಲ್ಲಿ ಸಂತ ಜಾರ್ಜ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯ ಗುರುಗಳಾದ ಹರಿಪ್ರಸಾದ್.ಕೆ., ಕಾರ್ಯಕ್ರಮ ಸಂಯೋಜಕರಾದ ಮಧು ಎ.ಜೆ. ಉಪಸ್ಥಿತರಿದ್ದರು.

ಉಪನ್ಯಾಸಕ ಪ್ರಜ್ವಲ್.ಕೆ.ಪಿ., ರವರ ನೇತೃತ್ವದಲ್ಲಿ ಮಾದಕ ಮುಕ್ತ ಜೀವನ ವಿಷಯದ ಬಗ್ಗೆ ವಿಡಿಯೋ ಪ್ರದರ್ಶನ ನೆರವೇರಿಸಲಾಯಿತು.

ಎನ್ಎಸ್ಎಸ್ ಕಾರ್ಯಕ್ರಮ ಅಧಿಕಾರಿ ವಿಶ್ವನಾಥ ಶೆಟ್ಟಿ.ಕೆ ಕಾರ್ಯಕ್ರಮವನ್ನು ಸಂಯೋಜಿಸಿ ನಿರೂಪಿಸಿದರು. ಕಾಲೇಜು ಸಂಸತ್ತಿನ ನಾಯಕಿ ಕುಮಾರಿ ಲಿಖಿತ ವಂದನಾರ್ಪಣೆಗೈದರು. ಎನ್ಎಸ್ಎಸ್ ನಾಯಕರಾದ ಮೋಹನ ಕುಮಾರ್, ಕಾವ್ಯ ಉಪಸ್ಥಿತರಿದ್ದರು. ಎನ್ ಎಸ್ ಎಸ್ ಸ್ವಯಂಸೇವಕಿ ತೃಪ್ತಿ ಮತ್ತು ತಂಡದವರು ಎನ್ ಎಸ್ ಎಸ್ ಧ್ಯೇಯಗೀತೆಯನ್ನು ಹಾಡಿದರು.

ಉಪನ್ಯಾಸಕರಾದ ಚೇತನ್ ಕುಮಾರ್. ಟಿ, ಕಿರಣ್ ರೈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Leave a Reply

error: Content is protected !!