ಅಕ್ರಮ ಮರಳು ಸಾಗಾಟ; ಪತ್ತೆ ಹಚ್ಚಿದ ಉಪ್ಪಿನಂಗಡಿ ಪೊಲೀಸರು

ಶೇರ್ ಮಾಡಿ

ನೆಲ್ಯಾಡಿ: ಪಿಕಪ್ ವಾಹನದಲ್ಲಿ ಅಕ್ರಮ ಮರಳು ಸಾಗಾಟ ನಡೆಸುತ್ತಿದ್ದ ಪ್ರಕರಣ ಪತ್ತೆ ಹಚ್ಚಿದ ಉಪ್ಪಿನಂಗಡಿ ಪೊಲೀಸರು ಪರಾರಿಯಾಗಲೆತ್ನಿಸಿದ ಆರೋಪಿ ಪಿಕಪ್ ಚಾಲಕನನ್ನು ಬಂಧಿಸಿದ ಘಟನೆ ಕಡಬ ತಾಲ್ಲೂಕು, ಇಚಿಲಂಪಾಡಿ ಗ್ರಾಮದ ಪಿರಿಯಶಾಂತಿ ಎಂಬಲ್ಲಿ ಜ.16 ರಂದು ಸಂಜೆ ವೇಳೆ ನಡೆದಿದೆ.

ಬಂಧಿತ ಆರೋಪಿ ಪಿಕಪ್ ಚಾಲಕನನ್ನು ಕಡಬ ತಾಲೂಕು ನೆಲ್ಯಾಡಿ ನಿವಾಸಿ ಸಿಬು ಜಾನ್ (41 ವ) ಎಂದು ಗುರುತಿಸಲಾಗಿದೆ.

ಉಪ್ಪಿನಂಗಡಿ ಪೊಲೀಸ್ ಠಾಣಾ ಸಬ್ ಇನ್ಸ್ಪೆಕ್ಟರ್ ರಾಜೇಶ್ ಕೆ.ವಿ ನೇತೃತ್ವದಲ್ಲಿ ಪೊಲೀಸ್ ಸಿಬ್ಬಂದಿಗಳಾದ ರುದ್ರಪ್ಪ, ಪ್ರತಾಪ್ ರೆಡ್ಡಿ, ಮುಸ್ತಾರ್ ಕಾರ್ಯಾಚರಣೆ ನಡೆಸಿದ್ದಾರೆ.

ಬಂಧಿತ ಆರೋಪಿ, ಪಿಕಪ್ ವಾಹನ ಮತ್ತು ಮರಳನ್ನು ವಶಪಡಿಸಿಕೊಂಡು. ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

error: Content is protected !!