![](https://i0.wp.com/nesaranewsworld.com/wp-content/uploads/2024/01/WhatsApp-Image-2024-01-30-at-12.07.35-AM.jpeg?resize=938%2C514&ssl=1)
ನೆಲ್ಯಾಡಿ ಗ್ರಾಮದ ಪಡ್ಡಡ್ಕ ಕುಂಜ್ಜಮ್ಮರವರ ಮನೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್(ರಿ)ಕಡಬ ತಾಲೂಕು ನೆಲ್ಯಾಡಿ ವಲಯದ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಉದ್ಘಾಟನೆಲ್ಯಾಡಿ: ಶೌರ್ಯ ವಿಪತ್ತು ನಿರ್ವಹಣಾ ಘಟಕದ ಉದ್ಘಾಟನೆ ನಡೆಸಲಾಯಿತು.
![](https://i0.wp.com/nesaranewsworld.com/wp-content/uploads/2024/01/WhatsApp-Image-2024-01-30-at-12.09.05-AM.jpeg?resize=992%2C425&ssl=1)
ಕಾರ್ಯಕ್ರಮದ ಅಧ್ಯಕ್ಷತೆಯನ್ನು ನೆಲ್ಯಾಡಿ ಒಕ್ಕೂಟದ ಅಧ್ಯಕ್ಷ ಭಾಸ್ಕರ ಶೆಟ್ಟಿ ವಹಿಸಿದ್ದರು. ನೆಲ್ಯಾಡಿ ವಲಯದ ಜನಜಾಗೃತಿ ವೇದಿಕೆ ಅಧ್ಯಕ್ಷ ಜಯಾನಂದ ಬಂಟ್ರಿಯಾಲ್ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭಹಾರೈಸಿದರು.
ಶೌರ್ಯ ವಿಪತ್ತು ನಿರ್ವಹಣಾ ಘಟಕದ ಯೋಜನಾಧಿಕಾರಿ ಜೈವಂತ್ ಪಟೆಗಾರ್ ರವರು ಶೌರ್ಯ ವಿಪತ್ತು ನಿರ್ವಹಣಾ ಘಟಕದ ಬಗ್ಗೆ ಮಾಹಿತಿ ಮಾರ್ಗದರ್ಶನ ನೀಡಿದರು. ವೇದಿಕೆಯಲ್ಲಿ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಪ್ರತಿನಿಧಿ ರಮೇಶ್ ಬಾಣಜಾಲು, ನೆಲ್ಯಾಡಿ ವಲಯದ ಮೇಲ್ವಿಚಾರಕರಾದ ವಿಜೇಶ್ ಜೈನ್ ಉಪಸ್ಥಿತರಿದ್ದರು.
ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಘಟಕ ಸಂಯೋಜಕರಾದ ನಮಿತಾ ಶೆಟ್ಟಿ ಪ್ರಾರ್ಥಿಸಿದರು. ನೆಲ್ಯಾಡಿ ಒಕ್ಕೂಟದ ಸೇವಪ್ರತಿನಿಧಿ ಹೇಮಾವತಿ ಜೆ., ನಿರೂಪಿಸಿ ಸ್ವಾಗತಿಸಿದರು. ವಲಯ ಮೇಲ್ವಿಚಾರಕ ವಿಜೇಶ್ ಜೈನ್ ವಂದಿಸಿದರು.
ಕಾರ್ಯಕ್ರಮದ ಬಳಿಕ ಪಡ್ಡಡ್ಕ ಕುಂಜ್ಜಮ್ಮರವರ ಮನೆಯ ಸುತ್ತ ಮುತ್ತ, ಮನೆಯ ಒಳಗಡೆ ಪೂರ್ತಿ ಸ್ವಚ್ಚತೆಯನ್ನು ಘಟಕದ ಎಲ್ಲ ಸದಸ್ಯರು ಸೇರಿ ಮಾಡಿದರು.
![](https://i0.wp.com/nesaranewsworld.com/wp-content/uploads/2024/01/WhatsApp-Image-2024-01-04-at-3.24.22-PM-1-3-1024x455-1.jpeg?resize=1024%2C455&ssl=1)
![](https://i0.wp.com/nesaranewsworld.com/wp-content/uploads/2024/01/WhatsApp-Image-2023-06-19-at-2.49.48-PM.jpeg?resize=723%2C1024&ssl=1)
![](https://i0.wp.com/nesaranewsworld.com/wp-content/uploads/2024/01/WhatsApp-Image-2023-09-29-at-10.07.05.jpg?resize=724%2C1024&ssl=1)
![](https://i0.wp.com/nesaranewsworld.com/wp-content/uploads/2024/01/WhatsApp-Image-2024-01-20-at-2.32.04-PM-1.jpeg?resize=712%2C1024&ssl=1)