ಕೊಕ್ಕಡ ಮೈಪಾಲ ಸೇತುವೆ ಬಳಿ ನೀರಿನ ಟ್ಯಾಂಕರ್ ಪಲ್ಟಿಯಾಗಿ ಚಾಲಕ ಸಾವು

ಶೇರ್ ಮಾಡಿ

ಕೊಕ್ಕಡ ಗ್ರಾಮದ ಮೈಪಾಳ ಎಂಬಲ್ಲಿ ಮೈಪಾಳ ವೆಂಟೆಂಡ್‌ ಡ್ಯಾಮ್‌ ಬ್ರಿಡ್ಜ್‌ ಕಾಮಗಾರಿ ನಡೆಯುತ್ತಿರುವ ಸ್ಥಳದಲ್ಲಿ ನೀರಿನ ಟ್ಯಾಂಕರ್‌ ನಲ್ಲಿ ನೀರು ತುಂಬಿಸಿಕೊಂಡು, ಟ್ಯಾಂಕರ್‌ ನ್ನು ನಿರ್ಲಕ್ಷ್ಯತನದಿಂದ ಚಲಾಯಿಸಿದ ಪರಿಣಾಮ, ಟ್ರಾಕ್ಟರ್‌ ಪಲ್ಟಿಯಾಗಿ ಚಾಲಕ ಟ್ರಾಕ್ಟರ್ ನ ಅಡಿಯಲ್ಲಿ ಬಿದ್ದು ಸಾವನ್ನಪ್ಪಿದ ಘಟನೆ ಮಾ.1ರಂದು ಮಧ್ಯಾಹ್ನ ನಡೆದಿದೆ.
ಮೃತಪಟ್ಟ ಚಾಲಕ ಸುರೇಶ್‌ ಮಲ್ಲಪ್ಪ ಹೊಸಮನಿ ಎಂದು ಗುರುತಿಸಲಾಗಿದೆ.
ಘಟನಾ ಸ್ಥಳಕ್ಕೆ ಧರ್ಮಸ್ಥಳ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಮೃತದೇಹವನ್ನು ಬೆಳ್ತಂಗಡಿಯ ಸರಕಾರಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.
ಈ ಬಗ್ಗೆ ಹಾವೇರಿ ನಿವಾಸಿ ಮಂಜಪ್ಪ ಬರಮಪ್ಪ ತೋಟಿಗೇರ್‌ ನೀಡಿದ ದೂರಿನ ಮೇರೆಗೆ ಧರ್ಮಸ್ಥಳ ಪೊಲೀಸ್ ಠಾಣಾ ಅ ಕ್ರ: 15/2024 ಕಲಂ: 304 (A), ಐ ಪಿ ಸಿ ಪ್ರಕರಣ

Leave a Reply

error: Content is protected !!