ಜೆಸಿಐ ಪಂಜ ಪಂಚಶ್ರೀ ಹಾಗೂ ಕೆ.ವಿ.ಜಿ ದಂತ ಮಹಾವಿದ್ಯಾಲಯದ ವತಿಯಿಂದ ಮಕ್ಕಳ ದಂತ ಚಿಕಿತ್ಸಾ ಶಿಬಿರ

ಶೇರ್ ಮಾಡಿ

ಜೇಸಿಯ ಪಂಜ ಪಂಚಶ್ರೀ ಹಾಗೂ ಕೆ.ವಿ.ಜಿ ದಂತ ಮಹಾವಿದ್ಯಾಲಯದ ವತಿಯಿಂದ ಮಕ್ಕಳ ದಂತ ಚಿಕಿತ್ಸಾ ಶಿಬಿರ ಪಂಜ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜರುಗಿತು.ಎಸ್.ಡಿ.ಎಂ.ಸಿ ಅಧ್ಯಕ್ಷ ಸೋಮಶೇಖರ ನೇರಳ ದೀಪ ಬೆಳಗಿಸಿ ಶಿಬಿರ ಉದ್ಘಾಟಿಸಿ ‘ಸೌಂದರ್ಯ ವರ್ಧಕ ಹಾಗೂ ಆರೋಗ್ಯಕ್ಕೆ ಪೂರಕವಾಗಿರುವ ಹಲ್ಲಿನ ಕುರಿತಾಗಿ ವಿದ್ಯಾರ್ಥಿಗಳಲ್ಲಿ ಅರಿವು ಹಾಗೂ ಕಾಳಜಿ ಅಗತ್ಯ’ಎಂದರು.

ಕೆ.ವಿ.ಜಿ ದಂತ ಮಹಾವಿದ್ಯಾಲಯದ ವೈದ್ಯರಾದ ಡಾ.ಅಲ್ವಿನ್ ಶಿಬಿರದ ಮಹತ್ವ ಹಾಗೂ ಕಾರ್ಯವಿಧಾನವನ್ನು ವಿವರಿಸಿದರು. ಡಾ.ಅಮೋಘ, ಶಾಲೆಯ ಮುಖ್ಯ ಶಿಕ್ಷಕಿ ಲೀಲಾ ಕುಮಾರಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಜೆಸಿಐ ಅಧ್ಯಕ್ಷ ಜೀವನ್ ಮಲ್ಕಜೆ ಅಧ್ಯಕ್ಷತೆ ವಹಿಸಿದ್ದರು. ಶಿವಪ್ರಸಾದ್ ಹಾಲೆಮಜಲು ವೇದಿಕೆಗೆ ಆಹ್ವಾನಿಸಿದರು. ನಾಗ್ಮಣಿ ಕೆದಿಲ ಜೇಸಿ ವಾಣಿ ವಾಚಿಸಿದರು. ಕಾರ್ಯದರ್ಶಿ ಜೀವನ್ ಶೆಟ್ಟಿಗದ್ದೆ ವಂದಿಸಿದರು.

Leave a Reply

error: Content is protected !!