ಮಾ.21-24: ಶಿಶಿಲ ಶ್ರೀಗಡಿಚಾಮುಂಡಿ ದೇವಸ್ಥಾನದಲ್ಲಿ ಪುನಃಪ್ರತಿಷ್ಠಾ ಬ್ರಹ್ಮಕಲಶೋತ್ಸವ

ಶೇರ್ ಮಾಡಿ

ಬೆಳ್ತಂಗಡಿ ತಾಲೂಕಿನ ಶಿಶಿಲ ಗ್ರಾಮದ ಹೊಳೆಗಂಡಿಯ ಶ್ರೀಗಡಿಚಾಮುಂಡಿ ಅಮ್ಮನವರ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಮಾ.21ರಿಂ ದ ಮಾ.24ರ ವರೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗಡೆಯವರ ಶುಭಾಶೀರ್ವಾದದೊಂದಿಗೆ ಶ್ರೀಕೃಷ್ಣಪ್ರಸಾದ ಉಡುಪರ ನೇತೃತ್ವದಲ್ಲಿ ನಡೆಯಲಿದೆ.

ಮಾ.21 ರಂದು ಸಂಜೆ 4ಕ್ಕೆ ತಂತ್ರಿ ಹಾಗೂ ಋತ್ವಿಜರ ಆಗಮನ, ದೇವತಾ ಪ್ರಾರ್ಥನೆ, ಸ್ವಸ್ತಿ ಪುಣ್ಯಾಹವಾಚನ, ಪ್ರಸಾದ ಶುದ್ದಿ, ವಾಸ್ತು ಬಲಿ ಹೋಮ, ದುರ್ಗಾ ನಮಸ್ಕಾರ ಪೂಜೆ, ಮಹಾಪೂಜೆ, ಅನ್ನ ಸಂತರ್ಪಣೆ ಮಾ.22ರಂದು ಬೆಳಗ್ಗೆ 6ರಿಂದ ಸ್ವಸ್ತಿ ಪುಣ್ಯಾಹವಾಚನ, ಗಣಪತಿ ಹೋಮ, ಐಕ್ಯಮತ್ಯ ಹೋಮ, ತತ್ತ್ವ ಹೋಮ ಕಲಶ, ಕೊರೆಕಾಣಿಕೆ ಸಮರ್ಪಣೆ, ಮಹಾಪೂಜೆ, ತೀರ್ಥಪ್ರಸಾದ ವಿತರಣೆ, ಅನ್ನಸಂತರ್ಪಣೆ, ದುರ್ಗಾಪೂಜೆ ಮತ್ತು ಮಹಾಪೂಜೆ, ಶ್ರೀ ರಾಮಾಂಜನೇಯ ಭಜನಾ ಮಂಡಳಿ ಅಡ್ಡಹಳ್ಳ ಇವರಿಂದ ಭಜನಾ ಕಾರ್ಯಕ್ರಮ, ಅನ್ನಸಂತರ್ಪಣೆ. ಮಾ.23ರಂದು ಬೆಳಗ್ಗೆ 6ರಿಂದ ಸ್ವಸ್ತಿ ಪುಣ್ಯಾಹವಾಚನ, ಗಣ ಹೋಮ, ಚಂಡಿಕಾಹೋಮ, ಮಹಾಪೂಜೆ, ತೀರ್ಥಪ್ರಸಾದ ವಿತರಣೆ, ಅನ್ನಸಂತರ್ಪಣೆ, ಮಂಟಪ ಸಂಸ್ಕಾರ, ದುರ್ಗಾ ನಮಸ್ಕಾರ ಪೂಜೆ, ಮಹಾಪೂಜೆ, ಮತ್ಸ್ಯ ಶಿವದುರ್ಗ ಭಜನಾ ಮಂಡಳಿ ಶಿಶಿಲ ಇವರಿಂದ ಭಜನಾ ಕಾರ್ಯಕ್ರಮ, ಅನ್ನಸಂಪರ್ಪಣೆ. ಮಾ.24ರಂದು ಬೆಳಗ್ಗೆ 6ರಿಂದ ಸ್ವಸ್ತಿ ಪುಣ್ಯಾಹವಾಚನ, ಗಣ ಹೋಮ, ಅಷ್ಟೋತ್ತರ ಶತಕಲಶ ಪೂಜೆ, ಊರ ವಿವಿಧ ಭಜನಾ ಮಂಡಳಿಗಳಿಂದ ಭಜನಾ ಕಾರ್ಯಕ್ರಮ, ಶ್ರೀಚಾಮುಂಡೇಶ್ವರಿಗೆ ಬ್ರಹ್ಮಕಲಶಾಭಿಷೇಕ, ಮಹಾಪೂಜೆ, ತೀರ್ಥ ಪ್ರಸಾದ ವಿತರಣೆ ಹಾಗೂ ಅನ್ನ ಸಂತರ್ಪಣೆ ನಡೆಯಲಿದೆ ಎಂದು ಆಡಳಿತ ಸಮಿತಿ ಗೌರವಾಧ್ಯಕ್ಷ ಶ್ರೀನಿವಾಸ್ ಮೊಡೆತ್ತಾಯ, ಕಾರ್ಯಾಧ್ಯಕ್ಷ ಸುಬ್ರಹ್ಮಣ್ಯ ನೆಲ್ಲಿತ್ತಾಯ, ಗೌರವ ಸಲಹೆಗಾರ ಹರೀಶ್ ಪೂಂಜ, ಅಧ್ಯಕ್ಷ ಪರಮೇಶ್ವರ ಗೌಡ ಮಂಡೆಕರ, ಉಪಾಧ್ಯಕ್ಷ ಹರೀಶ್ ಹೊಳೆಗಂಡಿ, ಕಾರ್ಯದರ್ಶಿ ಕೆ.ಧರ್ಮಪಾಲ, ಉಪಕಾರ್ಯದರ್ಶಿ ಪುನೀತ್ ದೇನೋಡಿ, ಕೋಶಾಧಿಕಾರಿ ಮಾಧವ ಪೂಜಾರಿ ದೇನೋಡಿ ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರು, ಸಲಹೆಗರಾರು ತಿಳಿಸಿದರು.

Leave a Reply

error: Content is protected !!