ಅರಣ್ಯದಲ್ಲಿ ಅಸ್ಥಿಪಂಜರ ಸ್ಥಿತಿಯಲ್ಲಿ ವ್ಯಕ್ತಿಯೊಬ್ಬನ ಶವ ಪತ್ತೆ

ಶೇರ್ ಮಾಡಿ

ಪುದುವೆಟ್ಟು ಬೋಳ್ಮಿನಾರು, ಅರಣ್ಯ ಪರಿಸರದ ಪದವು ಎಂಬಲ್ಲಿ ಅಸ್ತಿಪಂಜರ ಸ್ಥಿತಿಯಲ್ಲಿ ವ್ಯಕ್ತಿಯೊಬ್ಬನ ಶವ ಪತ್ತೆ.

ಶವ ಪತ್ತೆ ಸ್ಥಳದಲ್ಲಿ ಆಧಾರ್ ಕಾರ್ಡ್ ಹಾಗೂ ಇತರ ಸ್ವತ್ತುಗಳ ದೊರೆತ ಪ್ರಕಾರ ಮೃತ ವ್ಯಕ್ತಿಯ ಮನೆಯವರನ್ನು ಸ್ಥಳಕ್ಕೆ ಕರೆಯಿಸಿದ್ದು ಅಲ್ಲಿದ್ದ ಬ್ಯಾಗ್ ಹಾಗೂ ಆಧಾರ್ ಕಾರ್ಡ್ ಆಧಾರದಲ್ಲಿ ಮೃತಪಟ್ಟ ವ್ಯಕ್ತಿ ಕಳೆಂಜ ಗ್ರಾಮದ ಕಾಯರ್ತಡ್ಕದ ರಾಜು ಎಂಬುದಾಗಿ ಮನೆಯವರು ಸ್ಪಷ್ಟಪಡಿಸಿ ಗುರುತಿಸಲಾಗಿದೆ.

ಬುಧವಾರ ಮಧ್ಯಾಹ್ನದ ಹೊತ್ತು ಅರಣ್ಯ ಪ್ರದೇಶದಿಂದ ಸೊಪ್ಪು ತರಲು ತೆರಳಿದ್ದ ಸ್ಥಳೀಯರು ರಸ್ತೆಯಿಂದ ಸುಮಾರು 100 ಮೀಟರ್ ದೂರ ಪ್ರದೇಶದಲ್ಲಿ ಮಲಗಿರುವ ಸ್ಥಿತಿಯಲ್ಲಿದ್ದ ಶವವನ್ನು ಗುರುತಿಸಿದ್ದು, ಈ ಬಗ್ಗೆ ಧರ್ಮಸ್ಥಳ ಪೊಲೀಸರಿಗೆ ಮಾಹಿತಿ ನೀಡಿದರು.

ಮೃತ ರಾಜು ಅವರು ವಿಪರೀತ ಮದ್ಯಪಾನದ ಚಟವನ್ನು ಹೊಂದಿದ್ದು , ಸ್ಥಳದಲ್ಲಿ ಮದ್ಯದ ಬಾಟಲ್ ಪತ್ತೆಯಾಗಿದ್ದು ಮದ್ಯಪಾನ ಅಥವಾ ಅನಾರೋಗ್ಯದಿಂದ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.

ರಬ್ಬರ್ ಟ್ಯಾಪಿಂಗ್ ವೃತ್ತಿ ನಡೆಸುತ್ತಿದ್ದ ರಾಜು ಅವರು ಮೂರು ವರ್ಷಗಳ ಹಿಂದೆಯೇ ಮನೆ ಬಿಟ್ಟಿದ್ದರು ಅವರು ಎಂದು ತಿಳಿಸಿದ್ದಾರೆ. ಈ ಬಗ್ಗೆ ಮೃತ ವ್ಯಕ್ತಿಯ ಪುತ್ರ ಧರ್ಮಸ್ಥಳ ಠಾಣೆಗೆ ದೂರು ನೀಡಿದ್ದಾರೆ.

Leave a Reply

error: Content is protected !!