ಸುರ್ಯ ಶ್ರೀ ಸದಾಶಿವ ರುದ್ರ ದೇವಸ್ಥಾನಕ್ಕೆ ಅರುಣ್ ಚಕ್ರವರ್ತಿ ಭೇಟಿ

ಶೇರ್ ಮಾಡಿ

ಉಜಿರೆ: ಕರ್ನಾಟಕ ರಾಜ್ಯ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ ಅರುಣ್ ಚಕ್ರವರ್ತಿ ಅವರು ಮಣ್ಣಿನ ಹರಕೆ ಖ್ಯಾತಿಯ ಸುರ್ಯ ಸದಾಶಿವರುದ್ರ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ದೇವಸ್ಥಾನದ ಆನುವಂಶೀಯ ಆಡಳಿತ ಮೊಕ್ತೇಸರ ಡಾ.ಸತೀಶ್ಚಂದ್ರ ಸುರ್ಯಗುತ್ತು ಅವರು ದೇವಸ್ಥಾನದ ಪರವಾಗಿ ಅರುಣ್ ಚಕ್ರವರ್ತಿ ಅವರನ್ನು ಬರಮಾಡಿಕೊಂಡು ಗೌರವ ಸಲ್ಲಿಸಿದರು.
ಬಿ.ಮುನಿರಾಜ ಅಜ್ರಿ, ಪ್ರಕಾಶ್ ಭಟ್, ರಾಧಾಕೃಷ್ಣ ಭಟ್, ಪ್ರಸಾದ್ ಉಪಸ್ಥಿತರಿದ್ದರು.

Leave a Reply

error: Content is protected !!