ನೆಲ್ಯಾಡಿ ಜೆಸಿಐ ವತಿಯಿಂದ ಅಂಬೇಡ್ಕರ್ ಜನ್ಮದಿನಾಚರಣೆ

ಶೇರ್ ಮಾಡಿ

ನೆಲ್ಯಾಡಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 133ನೇ ಜಯಂತಿ ಇಂದು. ಇದರ ಅಂಗವಾಗಿ ನೆಲ್ಯಾಡಿ ಜೆಸಿಐ ವತಿಯಿಂದ ಗ್ರಾಮ ಪಂಚಾಯತ್ ನೆಲ್ಯಾಡಿಯಲ್ಲಿ ಅಂಬೇಡ್ಕರ್ ಜಯಂತಿ ಆಚರಿಸಲಾಯಿತು.

ಜೆಸಿಐ ಅಧ್ಯಕ್ಷೆ ಸುಚಿತ್ರ.ಜೆ ಬಂಟ್ರಿಯಾಲ್ ಅವರು ಅಂಬೇಡ್ಕರ್ ಭಾವಚಿತ್ರಕ್ಕೆ ಹೂವಿನ ಹಾರ ಹಾಕಿ ಮಾತನಾಡಿ ಬಾಬಾಸಾಹೇಬ್ ಅಂಬೇಡ್ಕರ್ ಅವರ ಜೀವನ ತತ್ವವನ್ನು ಪ್ರತಿಯೊಬ್ಬ ನಾಗರಿಕರು ತಮ್ಮ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಇದರಿಂದ ಉತ್ತಮ ಸಮಾಜ ಮತ್ತು ದೇಶವನ್ನು ಕಟ್ಟಲು ಸಾಧ್ಯ. ಅವರು ನೀಡಿದ ಸಂವಿಧಾನದಿಂದ ಸಮಾಜದಲ್ಲಿ ಪ್ರತಿಯೊಬ್ಬರಿಗೂ ಅವರವರ ಹಕ್ಕುಗಳನ್ನು ಪಡೆಯಲು ಸಾಧ್ಯವಾಗುತ್ತಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಪೂರ್ವಧ್ಯಕ್ಷರುಗಳಾದ ಜೇಸಿ ಶಿವಪ್ರಸಾದ್ ಹಾಗೂ ಜೇಸಿ ಗಿರೀಶ್, ಜೇಸಿ ಸದಸ್ಯ ವಿನ್ಯಾಸ್ ಬಂಟ್ರಿಯಾಲ್, ಪಂಚಾಯತ್ ಸಿಬ್ಬಂದಿ ಸೋಮನಾಥ್ ಹಾಗೂ ಊರವರು ಭಾಗವಹಿಸಿದರು.

Leave a Reply

error: Content is protected !!