ಕೆ ಎಸ್ ಎಸ್ ಕಾಲೇಜಿನಲ್ಲಿ ಅಂಬೇಡ್ಕರ್ ಜಯಂತಿ ದಿನಾಚರಣೆ

ಶೇರ್ ಮಾಡಿ

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ಹಬ್ಬಗಳ ದಿನಾಚರಣೆ ಸಮಿತಿ ವತಿಯಿಂದ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ರವರ ಜನ್ಮದಿನಾಚರಣೆ ಹಾಗೂ ಗೀತ ನಮನ ಕಾರ್ಯಕ್ರಮವನ್ನು ಏ.16ರಂದು ನಡೆಯಿತು.

ಕುಕ್ಕೆ ಸುಬ್ರಹ್ಮಣ್ಯೇಶ್ವರ ದೇವಾಲಯದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಕಾಲೇಜಿನ ಕಾರ್ಯದರ್ಶಿ ಡಾ.ನಿಂಗಯ್ಯ ಇವರು ಅಧ್ಯಕ್ಷತೆ ವಹಿಸಿದ್ದರು.

ಕಾರ್ಯಕ್ರಮದಲ್ಲಿ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ.ದಿನೇಶ್.ಪಿ.ಟಿ, ಐ.ಕ್ಯು.ಎಸ್.ಸಿ ಸಂಯೋಜಕಿ ಲತಾ.ಬಿ.ಟಿ ಹಾಗೂ ರಾಷ್ಟ್ರೀಯ ಹಬ್ಬಗಳ ದಿನಾಚರಣೆ ಸಮಿತಿಯ ಸಂಯೋಜಕ ಡಾ.ದಿನೇಶ್.ಕೆ ಹಾಗೂ ಸಾಂಸ್ಕೃತಿಕ ತಂಡದ ನಿರ್ದೇಶಕವಿನ್ಯಾಸ.ಹೆಚ್ ಉಪಸ್ಥಿತರಿದ್ದರು.

ಡಾ.ಬಿ.ಆರ್ ಅಂಬೇಡ್ಕರ್ ರವರಿಗೆ ಪುಷ್ಪಾರ್ಚನೆ ಹಾಗೂ ಗೀತನಮನದ ಮೂಲಕ ಗೌರವವನ್ನು ಅರ್ಪಿಸಲಾಯಿತು. ರಾಷ್ಟ್ರೀಯ ಹಬ್ಬಗಳ ದಿನಾಚರಣೆ ಸಮಿತಿಯ ಸದಸ್ಯ ಪುಷ್ಪ.ಡಿ ನಿರೂಪಿಸಿದರು. ಮಧುರ.ಕೆ ವಂದಿಸಿದರು.

Leave a Reply

error: Content is protected !!