ನಾಳೆ ಕುತ್ರಾಡಿ-ಹಾರ್ಪಳ ಶ್ರೀ ಶಾಸ್ತರೇಶ್ವರ ದೇವಸ್ಥಾನ ಪ್ರತಿಷ್ಠಾ ವಾರ್ಷಿಕೋತ್ಸವ

ಶೇರ್ ಮಾಡಿ

ನೆಲ್ಯಾಡಿ ಇಲ್ಲಿ ಸಮೀಪದ ಕುತ್ರಾಡಿ-ಹಾರ್ಪಳ ಶ್ರೀ ಶಾಸ್ತರೇಶ್ವರ ದೇವಸ್ಥಾನದ 8ನೇ ವರುಷದ ಪ್ರತಿಷ್ಠಾ ವಾರ್ಷಿಕೋತ್ಸವ ಏ.22ರಂದು ಕೆಮ್ಮಿಂಜೆ ನಾಗೇಶ ತಂತ್ರಿ ಅವರ ನೇತೃತ್ವದಲ್ಲಿ ವಿವಿಧ ವೈದಿಕ ಕಾರ್ಯಕ್ರಮಗಳು ನೆರವೇರಲಿದೆ.

ಬೆಳಗ್ಗೆ 7ರಿಂದ ಭಜನಾ ಕಾರ್ಯಕ್ರಮ, 8:30ಕ್ಕೆ ನಿತ್ಯ ಪೂಜೆ, ದೇವತಾ ಪ್ರಾರ್ಥನೆ, ಮಹಾಗಣಪತಿ ಹೋಮ, ಪಂಚವಿಂಶತಿ ಕಲಶ ಪೂಜೆ, ನಾಗತಂಬಿಲ ಸೇವೆ, ದೈವಗಳಿಗೆ ತಂಬಿಲ ಸೇವೆ, 11 ರಿಂದ ಪಂಚಾಮೃತ ಅಭಿಷೇಕ, ಪಂಚವಿಂಶತಿ ಸಾನಿಧ್ಯ, ಕಲಶಾಭಿಷೇಕ, ಮಹಾಪೂಜೆ ಪ್ರಸಾದ ವಿತರಣೆ, ಅನ್ನಸಂತರ್ಪಣೆ. ಸಂಜೆ 5:30ರಿಂದ ದುರ್ಗಾ ಪೂಜೆ, ರಂಗಪೂಜೆ. ರಾತ್ರಿ 7:30ರಿಂದ ಭಜನಾ ಮಂಗಳ, ಪ್ರಸಾದ ವಿತರಣೆ ಅನ್ನಸಂತರ್ಪಣೆ. ರಾತ್ರಿ 9:30ರಿಂದ ಸ್ಥಳಿಯರಿಂದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ ಎಂದು ಸಂಘಟಕರು ತಿಳಿಸಿದರು.

Leave a Reply

error: Content is protected !!