ರಾಮ-ಹನುಮ ಈಭೂಮಿಯಲ್ಲಿ ಚಿರಕಾಲ; ಉಂಡೆಮನೆ ವಿಶ್ವೇಶ್ವರ ಭಟ್

ಶೇರ್ ಮಾಡಿ

ಶಿಶಿಲ: ರಾಮ ಹನುಮ ಈಭೂಮಿಯಲ್ಲಿ ಚಿರಕಾಲ ಇದ್ದಾರೆ. ಎಲ್ಲಿ ಭಕ್ತಿಯಿಂದ ಭಜಿಸುವವರಿರುತ್ತಾರೊ ಅಲ್ಲಿ ರಾಮ ಹನುಮನಿರುತ್ತಾರೆ. ಭಜನೆ ಸಂಸ್ಕಾರ ಬೆಳೆಸುತ್ತದೆ. ಅಳುಕನ್ನು ದೂರ ಮಾಡುತ್ತದೆ.ನಮ್ಮ ಧರ್ಮ ನಂಬಿಕೆ ಇರುವಲ್ಲಿ ಹನುಮ ರಾಮನಿರುತ್ತಾರೆ. ನಾವು ಇರುವಲ್ಲಿಯವರೆಗೆ ಅವರೂ ಇರುತ್ತಾರೆ. ಅವರು ಇರುವಲ್ಲಿಯವರೆಗೆ ನಾವೂ ಇರುತ್ತೆವೆ. ಎಂದು ಸಾಹಿತಿ, ಬರಹಗಾರ, ನಿವೃತ್ತ ಪ್ರಾಂಶುಪಾಲ ಉಂಡೆಮನೆ ವಿಶ್ವೇಶ್ವರ ಭಟ್ ತಿಳಿಸಿದರು.

ಶಿಶಿಲ ಶಿವಕೀರ್ತಿ ನಿಲಯದಲ್ಲಿ‌ ನಡೆದ “ಹನುಮ‌ ಜಯಂತಿ” ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದ್ದರು.

ಅರಿಕೆಗುಡ್ದೆ ದೇವಾಲಯದ ಪ್ರಕಾಶ ಪಿಲಿಕಬೆ ಉದ್ಘಾಟನೆ ಮಾಡಿ ಹನುಮಂತ ರಾಮಾಯಣದ ರತ್ನ, ಭಕ್ತಿಗೆ ಮತ್ತು ಆದರ್ಶಕ್ಕೆ ಹನುಮ ನಮಗೆಲ್ಲಾ ಮಾದರಿ. ಭಜಿಸಿದವರಿಗೆ ಎಲ್ಲಾ ಪುಣ್ಯ ಕಾರ್ಯಗಳೂ ಜೀವನದಲ್ಲಿ ಲಭಿಸಲಿ ಎಂದು ಶುಭ ಹಾರೈಸಿದರು.

ವಿವಿಧ ಭಜನಾ ಮಂಡಳಿಯಿಂದ ಕುಣಿತ ಭಜನೆ, ಭಜನಾ ಪಟುಗಳಿಗೆ ಅಭಿನಂದನೆ, ರಾಮಾಯಣ ಹಕ್ಕಿ ನೋಟ ಪುಸ್ತಕ ವಿತರಣೆ ಮುಂತಾದ ಕಾರ್ಯಕ್ರಮ ಜರಗಿತ್ತು. ಸುಂದರ ಬಿಳಿನೆಲೆ ಮತ್ತು ತಂಡದವರು ಭಜನಾ ಕಾರ್ಯಕ್ರಮವನ್ನು ನಿರ್ವಹಿಸಿದ್ದರು.
ರಾಘವೇಂದ್ರ ಕಿಗ್ಗ, ಉದಯಶಂಕರ ಅರಸಿನಮಕ್ಕಿ, ಪುತ್ತೂರು ರವೀಂದ್ರ ಕುದ್ದಣ್ನಾಯ, ಭಾಸ್ಕರ ರಾವ್ ಮುಂಡ್ರುಪ್ಪಾಡಿ, ರವಿ ಕಾಸರಗೋಡು, ವಿಶು ಕುಮಾರ್ ಪೆರೆಡೆಲು, ಪ್ರೇಮಚಂದ್ರ ಪೆರ್ಲ, ಮೋಹನ ನೆಲ್ಲಿತ್ತಾಯ, ಶಿವರಾಮ ನೆಲ್ಲಿತ್ತಾಯ, ಶ್ರೀಪತಿ ಶಿಶಿಲ, ಪ್ರಕಾಶ ನೆಲ್ಲಿತ್ತಾಯ ಮೊದಲಾದವರು ಉಪಸ್ಥಿತರಿದ್ದರು.

Leave a Reply

error: Content is protected !!