ಶಿಬಾಜೆ: ಅಜಿರಡ್ಕದಲ್ಲಿ ಕಾಡಾನೆ ದಾಳಿ; ಕೃಷಿ ನಾಶ

ಶೇರ್ ಮಾಡಿ

ಕೊಕ್ಕಡ : ಶಿಬಾಜೆ ಗ್ರಾಮದ ಅಜಿರಡ್ಕ ಶ್ರೀಧರ ರಾವ್ ರವರ ತೋಟಕ್ಕೆ ಮೇ 7ರಂದು ತಡರಾತ್ರಿ ಕಾಡಾನೆ ದಾಳಿ ಮಾಡಿ ಪಸಲಿಗೆ ಬರುವ ತೆಂಗಿನ ಗಿಡ, ಕೊಕ್ಕೋ ಗಿಡ, ಬಾಳೆಗಿಡ ಅಪಾರ ಪ್ರಮಾಣದಲ್ಲಿ ನಾಶ ಮಾಡಿದೆ.

ಈ ಹಿಂದೆಯೂ ಇವರ ತೋಟಕ್ಕೆ ದಾಳಿ ಮಾಡಿದ್ದು ಕೃಷಿ ಹಾನಿ ಉಂಟು ಮಾಡಿತ್ತು, ಮೇ 6ರಂದು ಶಿಶಿಲ ಗ್ರಾಮದ ಕಳ್ಳಾಜೆ ದಿವಾಕರ ಗೌಡ ಇವರ ತೋಟಕ್ಕೂ ದಾಳಿ ಮಾಡಿರುವ ಬಗ್ಗೆ ಮಾಹಿತಿ ಲಭಿಸಿದೆ.

Leave a Reply

error: Content is protected !!