ಕಾಂಚನ : ಮೇ 20 ರಿಂದ ಮೇ 22 ತನಕ ಮಕ್ಕಳ ಬೇಸಿಗೆ ಶಿಬಿರ- ಸ್ಪಂದನ 2024

ಶೇರ್ ಮಾಡಿ

ಕಾಂಚನ: ಜೇಸಿಐ ಉಪ್ಪಿನಂಗಡಿ ಚಾರಿಟೇಬಲ್ ಟ್ರಸ್ಟ್ (ರಿ.) ಮತ್ತು ಜೇಸಿಐ ಉಪ್ಪಿನಂಗಡಿ ಘಟಕದ ನೇತೃತ್ವದಲ್ಲಿ ಕಾಂಚನ ಪ್ರೌಢಶಾಲೆಯಲ್ಲಿ ಎರಡನೇ ಬಾರಿಗೆ ಮಕ್ಕಳ ಬೇಸಿಗೆ ಶಿಬಿರ ಸ್ಪಂದನ 2024 ನಡೆಯಲಿದೆ. ಕಾಂಚನ ವೆಂಕಟಸುಬ್ರಮಣ್ಯಂ ಸ್ಮಾರಕ ಪ್ರೌಢ ಶಾಲೆ, ಶ್ರೀಲಕ್ಷ್ಮೀ ನಾರಾಯಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಮತ್ತು ವಿಕ್ರo ಯುವಕ ಮಂಡಲ ಕಾಂಚನ(.ರಿ.) ಇದರ ಸಂಯುಕ್ತ ಆಶ್ರಯದಲ್ಲಿ ನಡೆಯಲಿರುವ ಶಿಬಿರವು ಮೇ 20,2024 ರಿಂದ ಮೇ 22,2024 ತನಕ ನಡೆಯಲಿದೆ.

ಮಕ್ಕಳ ಬೇಸಿಗೆಯ ಅಮೂಲ್ಯ ಸಮಯವನ್ನು ಸದುಪಯೋಗ ಮಾಡಿಕೊಳ್ಳಲು ಮತ್ತು ಮಕ್ಕಳ ಕಲಿಕೆಗೆ ಪ್ರೇರಣೆ ಮತ್ತು ಪೂರಕವಾಗುವ ಉದ್ದೇಶದಿಂದ ಶಿಬಿರದಲ್ಲಿ ಚಿತ್ರಕಲೆ, ಮುಖವಾಡ ತಯಾರಿಕೆ, ನೃತ್ಯ, ಹಾಡು, ಭಾಷಣ ಕಲೆ, ಕ್ರಾಫ್ಟ್, ವ್ಯಕ್ತಿತ್ವ ವಿಕಸನ ತರಬೇತಿ, ರಂಗ ಅಭಿನಯ, ಜೀವನ ಕೌಶಲ್ಯ ತರಬೇತಿ ಶಿಬಿರ ರಾಜ್ಯ ಮಟ್ಟದ ನುರಿತ ನೀನಾಸಂ ರಂಗಕರ್ಮಿ ಉಪನ್ಯಾಸಕ ಶೀನಾ ನಾಡೋಳಿ ನೇತೃತ್ವದ ಸಂಪನ್ಮೂಲ ವ್ಯಕ್ತಿಗಳಿಂದ ತರಬೇತಿ ನಡೆಯಲಿದೆ. ಜೇಸಿಐ ಉಪ್ಪಿನಂಗಡಿ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಜೇಸಿ ಪ್ರಶಾಂತ್ ಕುಮಾರ್ ರೈ, ಜೇಸಿಐ ಉಪ್ಪಿನಂಗಡಿ ಘಟಕಾಧ್ಯಕ್ಷೆ ಜೇಸಿ ಲವೀನಾ ಪಿಂಟೊ, ಶಾಲಾ ಮುಖ್ಯೋಪಾಧ್ಯಾಯರಾದ ರಮೇಶ್ ಮಯ್ಯ, ಲಕ್ಷ್ಮಣ ಗೌಡ, ಯುವಕ ಮಂಡಲ ಅಧ್ಯಕ್ಷ ರಾಮಚಂದ್ರ ಕಾಂಚನ, ಜೇಸಿಐ ಘಟಕದ ನಿಕಟಪೂರ್ವ ಅಧ್ಯಕ್ಷ ಜೇಸಿ ಶೇಖರ್ ಗೌಂಡತ್ತಿಗೆ, ಶಿಬಿರ ನಿರ್ದೇಶಕ ಜೇಸಿ ಮೋಹನ್ ಚಂದ್ರ ತೋಟದ ಮನೆ, ಟ್ರಸ್ಟ್ ಕಾರ್ಯದರ್ಶಿ ಜೇಸಿ ಕೆ.ವಿ.ಕುಲಾಲ್, ಘಟಕ ಕಾರ್ಯದರ್ಶಿ ಜೇಸಿ ಸುರೇಶ್, ಯುವಕ ಮಂಡಲ ಕಾರ್ಯದರ್ಶಿ ಗಿರೀಶ್ ಮುದ್ಯ ಮಾರ್ಗದರ್ಶನದಲ್ಲಿ ತರಬೇತಿ ನಡೆಯಲಿದೆ.

ಪೂರ್ವ ಪ್ರಾಥಮಿಕ, ಪ್ರಾಥಮಿಕ,ಪ್ರೌಢಶಾಲೆ, ಪದವಿಪೂರ್ವ ಕಾಲೇಜು ಮತ್ತು ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ.

ಬೆಳಿಗ್ಗೆ 9.30 ರಿಂದ ಸಂಜೆ 4:00 ತನಕ ತರಬೇತಿ ನಡೆಯಲಿದೆ. ಮಧ್ಯಾಹ್ನ ಊಟ, ಲಘು ಉಪಹಾರದ ವ್ಯವಸ್ಥೆ ಕಲ್ಪಿಸಲಾಗಿದೆ. ಆಸಕ್ತ ಪೋಷಕರಿಗೂ ತರಬೇತಿಯಲ್ಲಿ ಭಾಗವಹಿಸಲು ಅವಕಾಶ ನೀಡಲಾಗಿದೆ.

Leave a Reply

error: Content is protected !!