ಚಲಿಸುತ್ತಿದ್ದ ಕಾರಿನ ಮೇಲೆ ಮರ ಹಾಗೂ ವಿದ್ಯುತ್ ಕಂಬ ಬಿದ್ದು ಇಬ್ಬರಿಗೆ ಗಾಯ

ಶೇರ್ ಮಾಡಿ

ಮಾಣಿ – ಮೈಸೂರು ಹೆದ್ದಾರಿಯ ಕುಕ್ಕರಬೆಟ್ಟಿ ಎಂಬಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಮರ ಹಾಗೂ ವಿದ್ಯುತ್ ಕಂಬ ಬಿದ್ದು ಇಬ್ಬರು ಗಾಯಗೊಂಡ ಘಟನೆ ಮೇ 21ರಂದು ಸಂಜೆ ಸಂಭವಿಸಿದೆ

ಕಾರು ನಜ್ಜುಗುಜ್ಜಾಗಿದೆ‌. ಮಂಗಳೂರಿನಿಂದ ನಾಲ್ವರು ಕಾರಿನಲ್ಲಿ ಮೈಸೂರಿಗೆ ಹೋಗುತ್ತಿದ್ದಾಗ ಗಾಳಿ ಮಳೆಯ ಪರಿಣಾಮ ಈ ಘಟನೆ ನಡೆಯಿತು.ಗಾಯಾಳುಗಳಿಬ್ಬರನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರಿನಲ್ಲಿದ್ದ ಇನ್ನಿಬ್ಬರು ಅಪಾಯದಿಂದ ಪಾರಾಗಿದ್ದಾರೆ, ಘಟನೆ ನಡೆದ ತಕ್ಷಣ ಧಾವಿಸಿದ ಸ್ಥಳೀಯರು ಗಾಯಾಳುಗಳನ್ನು ಹೊರ ತೆಗೆದು ಉಪಚರಿಸಿ ಆಸ್ಪತ್ರೆಗೆ ಸಾಗಿಸಿದರು.

ಘಟನೆಯಿಂದಾಗಿ ಹೆದ್ದಾರಿ ಸಂಚಾರ ಅಸ್ತವ್ಯಸ್ತಗೊಂಡಿತು.

Leave a Reply

error: Content is protected !!