ವಿದ್ಯಾರ್ಥಿಯ ಖಾತೆಯಿಂದ 3.14 ಲಕ್ಷ ರೂ. ನಗದು ಅಪಹರಣ

ಶೇರ್ ಮಾಡಿ

ಉಜಿರೆಯ ಪ್ರಕೃತಿ ಚಿಕಿತ್ಸಾ ಕಾಲೇಜಿನ ವಿದ್ಯಾರ್ಥಿಯ ಬ್ಯಾಂಕ್‌ ಖಾತೆಯಿಂದ ಅಪರಿಚಿತರು 3.14 ಲಕ್ಷ ರೂ. ನಗದನ್ನು ಅಪಹರಿಸಿದ ಘಟನೆ ನಡೆದಿದ್ದು, ಘಟನೆಯ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಉಜಿರೆ ಬಿ.ಎನ್‌.ವೈ ಎಸ್‌. ಕಾಲೇಜಿನಲ್ಲಿ ಮೂರನೇ ವರ್ಷದ ವಿದ್ಯಾರ್ಥಿಯಾಗಿರುವ ಪ್ರದೀಪ್‌ ಸುರೇಶ್‌ ರೂಗಿ ಎಂಬವರೇ ಹಣ ಕಳೆದುಕೊಂಡವರು.

ಇವರ ಊರಾದ ಗುಲ್ಬರ್ಗ ಜಿಲ್ಲೆಯ ಅಫ್ಜಲ್‌ಪುರದ ಯೂನಿಯನ್‌ ಬ್ಯಾಂಕಿನ ಖಾತೆಯಿಂದ ಹಣ ಅಪಹರಿಸಲಾಗಿದೆ.

ಮೇ 23 ರ ವರೆಗೆ ಇವರ ಖಾತೆಯಲ್ಲಿ ಹಣವಿತ್ತು. ರಾತ್ರಿ 8.30ರ ಬಳಿಕ ಇವರ ಮೊಬೈಲ್‌ ಗೆ ಎಸ್‌. ಎಂ.ಎಸ್‌.ಗಳು ಬಂದಿದ್ದು, ಒಟಿಪಿ ಬಂದಿದೆ. ಇದಕ್ಕೆ ಅವರು ಯಾವುದೇ ಪ್ರತಿಕ್ರಿಯೆ ನೀಡಿಲ್ಲ ಆದರೆ ಬೆಳಿಗ್ಗೆ ಪರಿಶೀಲಿಸಲಿದಾಗ ಅವರ ಖಾತೆಯಲ್ಲಿದ್ದ 3,14,000 ರೂ. ವನ್ನು ಯಾವುದೋ ಅನಾಮಧೇಯ ವ್ಯಕ್ತಿಯ ಖಾತೆಗೆ ವರ್ಗಾವಣೆಗೊಂಡಿರುವುದು ಕಂಡುಬರುತ್ತಿದೆ. ಎಂದು ಅವರು ಬೆಳ್ತಂಗಡಿ ಪೋಲಿಸರಿಗೆ ದೂರು ನೀಡಲಾಗಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Leave a Reply

error: Content is protected !!