ಬೆಳ್ಳಾರೆ ಪೊಲೀಸರಿಂದ ಎರಡು ವರ್ಷದ ಹಿಂದಿನ ಕಳವು ಪತ್ತೆ: ಆರೋಪಿಗಳ ಸಹಿತ ಸೊತ್ತು‌ ವಶ

ಶೇರ್ ಮಾಡಿ

ಬೆಳ್ಳಾರೆ: ಬೆಳ್ಳಾರೆ ಪೊಲೀಸರು ಎರಡು ವರ್ಷಗಳ ಹಿಂದೆ ನಡೆದ ಮನೆಗೆ ನುಗ್ಗಿ ಕಳವು ಪ್ರಕರಣವನ್ನು ಬೇಧಿಸಿ ಆರೋಪಿ ಮತ್ತು ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಬೆಳ್ಳಾರೆ ಠಾಣಾ ವ್ಯಾಪ್ತಿಯ, ಕಡಬ ತಾಲೂಕಿನ ಎಡಮಂಗಲ ಗ್ರಾಮದ ದಡ್ಡು ಎಂಬಲ್ಲಿ, ಎರಡು ವರ್ಷಗಳ ಹಿಂದೆ ನಡೆದ ಸುಮಾರು 1,48,000 ಮೌಲ್ಯದ ಚಿನ್ನಾಭರಣ ಮತ್ತು 30,000/- ನಗದು ಸೇರಿ ಒಟ್ಟು ರೂ 1,78,000/- ಮೌಲ್ಯದ ಮನೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣ ದಾಖಲಿಸಿಕೊಂಡು, ಕಳೆದ ಎರಡು ವರ್ಷಗಳಿಂದ ತನಿಖೆ ನಡೆಸುತ್ತಿರುವ ಬೆಳ್ಳಾರೆ ಪೊಲೀಸರು, ಪ್ರಸ್ತುತ ಪ್ರಕರಣದ ಆರೋಪಿ ಬೆಳ್ತಂಗಡಿ ನೆರಿಯಾ ನಿವಾಸಿ ಶರತ್(24) ಎಂಬಾತನನ್ನು ಬಂಧಿಸಿ ಆರೋಪಿ ಕಳವು ಮಾಡಿದ ಸೊತ್ತುಗಳನ್ನು ಪತ್ತೆ ಮಾಡಿ ವಶಪಡಿಸಿಕೊಳ್ಳಲಾಗಿದೆ.

ಕಳವು ಪ್ರಕರಣದ ಕಾರ್ಯಾಚರಣೆಯಲ್ಲಿ ಜಿಲ್ಲಾ ಪೊಲೀಸ್ ಅಧಿಕ್ಷಕರಾದ ಸಿ.ಬಿ ರಿಷ್ಯಂತ್, ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಜಗದೀಶ್.ಎಂ, ರಾಜೇಂದ್ರ ರವರ ಮಾರ್ಗದರ್ಶನದಲ್ಲಿ, ಪುತ್ತೂರು ಉಪವಿಭಾಗದ ಪ್ರಭಾರ ಪೊಲೀಸ್ ಉಪಾಧೀಕ್ಷಕರಾದ ವಿಜಯ ಪ್ರಸಾದ್, ಸುಳ್ಯ ವೃತ್ತ ನಿರೀಕ್ಷಕ ಸತ್ಯನಾರಾಯಣ.ಕೆ ರವರ ನೇತೃತ್ವದಲ್ಲಿ, ಬೆಳ್ಳಾರೆ ಎಸ್.ಐ.ಸಂತೋಷ್.ಬಿ.ಪಿ, ಬೆಳ್ಳಾರೆ ಪೊಲೀಸ್ ಠಾಣಾ ಸಿಬ್ಬಂದಿಗಳಾದ ನವೀನ ಕೆ. ಚಂದ್ರಶೇಖರ್ ಗೌಡ, ಸಂತೋಷ್.ಜಿ, ಜೀಪು ಚಾಲಕ ಪುರಂದರ ಹಾಗೂ ಬೆರಳುಮುದ್ರೆ ಘಟಕದ ಪ್ರಶಾಂತ್ ಹೊಸಮನಿ ಮತ್ತು ಸಚಿನ್.ಬಿ.ಬಿ ರವರನ್ನೊಳಗೊಂಡು ವಿಶೇಷ ತನಿಖಾ ತಂಡವು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

Leave a Reply

error: Content is protected !!