ನೆಲ್ಯಾಡಿ ಬೆಥನಿ ವಿದ್ಯಾಸಂಸ್ಥೆಯಲ್ಲಿ ವನಮಹೋತ್ಸವ

ಶೇರ್ ಮಾಡಿ

ನೆಲ್ಯಾಡಿ: ನೆಲ್ಯಾಡಿ ಬೆಥನಿ ವಿದ್ಯಾಸಂಸ್ಥೆಯಲ್ಲಿ ವನ ಮಹೋತ್ಸವ ಕಾರ್ಯಕ್ರಮ ಜು.11ರಂದು ನಡೆಯಿತು.

ನೆಲ್ಯಾಡಿ ಜೆಸಿಐ ಅಧ್ಯಕ್ಷೆ ಸುಚಿತ್ರ ಬಂಟ್ರಿಯಾಲ್ ಹಾಗೂ ನೆಲ್ಯಾಡಿ ಗ್ರಾಮ ಪಂಚಾಯಿತಿನ ಅಧ್ಯಕ್ಷ ಸಲಾಂ ಬಿಲಾಲ್ ತೆಂಗಿನ ಸಸಿ ನೆಡುವ ಮೂಲಕ ಜು.11ರಂದು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ನೆಲ್ಯಾಡಿ ಬೆಥನಿ ವಿದ್ಯಾಸಂಸ್ಥೆಯ ಸ್ಥಾಪಕ ಸಂಚಾಲಕ ಸಖರಿಯಾಸ್ ನಂದಿಯಾಟ್, ಸಂಸ್ಥೆಯ ಸಂಚಾಲಕ ಫಾ.ಜೈಸನ್ ಒಐಸಿ. ಫಾ.ಜಿಜನ್, ಶಿಕ್ಷಕ- ರಕ್ಷಕ ಸಂಘದ ಅಧ್ಯಕ್ಷ ಜಯಾನಂದ ಬಂಟ್ರಿಯಾಲ್, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಬಾಲಕೃಷ್ಣ ಬಾಣಜಾಲು, ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಮತ್ತು ಇ ಸ್ಟ್ರೀಮ್ ನ ನಿರ್ದೇಶಕ ಅಜಯ್, ಮುಖ್ಯ ಶಿಕ್ಷಕ ಜಾರ್ಜ್, ಐಟಿಐ ಪ್ರಿನ್ಸಿಪಾಲ್ ಸಜಿ ಉಪಸ್ಥಿತರಿದ್ದರು.

ಪ್ರಿನ್ಸಿಪಾಲ್ ಡಾ.ವರ್ಗೀಸ್ ಕೈಪನಡ್ಕ ಸ್ವಾಗತಿಸಿದರು. ಉಪಪ್ರಿನ್ಸಿಪಾಲ್ ಜೋಸ್ ಎಂ.ಜೆ ವಂದಿಸಿದರು.

Leave a Reply

error: Content is protected !!