ಶಿಶಿಲ: ಶ್ರೀ ಕ್ಷೇತ್ರ ಚಂದ್ರಪುರ ಭಗವಾನ್ 1008 ಶ್ರೀಚಂದ್ರನಾಥ ಸ್ವಾಮಿ ಜಿನಮಂದಿರದಲ್ಲಿ ಅಷ್ಟಾಹಿನಿಕ. ಪರ್ವ ಪೂಜಾ ಪ್ರಾರಂಭ

ಶೇರ್ ಮಾಡಿ

ಕೊಕ್ಕಡ: ಶಿಶಿಲ ಶ್ರೀ ಕ್ಷೇತ್ರ ಚಂದ್ರಪುರ ಭಗವಾನ್ 1008. ಶ್ರೀ ಚಂದ್ರನಾಥ ಸ್ವಾಮಿ ಜಿನಮಂದಿರದಲ್ಲಿ ಪರಮಪೂಜ್ಯ ಶ್ರೀ ಲಲಿತ ಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾ ಸ್ವಾಮೀಜಿ ಕಾರ್ಕಳ ಇವರ ಶುಭ ಆಶೀರ್ವಾದದೊಂದಿಗೆ. ಶ್ರೀ ಕ್ಷೇತ್ರ ಧರ್ಮಸ್ಥಳದ ಶ್ರೀಮತಿ ಹೇಮಾವತಿ.ವಿ. ಹೆಗ್ಗಡೆಯವರ ಮಾರ್ಗದರ್ಶನದೊಂದಿಗೆ ಜು.14 ಅಷ್ಣಹಿನಿಕಾ ಪೂಜಾ ಕಾರ್ಯಕ್ರಮ ಪ್ರಾರಂಭವಾಯಿತು.

ಸುಗುಣ ಎಸ್.ಡಿ ಶೆಟ್ಟಿ ಉಜಿರೆ ಅವರ ಮಗಳು ಪ್ರಗತಿ ರಾಜಿತ್ ಶೆಟ್ಟಿ ಶ್ರೀ ಕ್ಷೇತ್ರ ಚಂದ್ರಪುರಕ್ಕೆ 52 ಜಿನ ಬಿಂಬಗಳಿರುವ ನಂದೀಶ್ವರ ಮಂಟಪವನ್ನು ದಾನವಾಗಿ ನೀಡಿದ್ದು ಕೊಲ್ಲಾಪುರ ಸಮೀಪ ಉದ್ಗಾವ್ ನಲ್ಲಿ ಆಚಾರ್ಯ ಶ್ರೀ 108 ವಿಶುದ್ದ ಸಾಗರ ಮುನಿ ಮಹಾರಾಜರ ಅಮೃತ ಹಸ್ತದಿಂದ ನಂದೀಶ್ವರ ಮಂಟಪಕ್ಕೆ ಲಘು ಪಂಚಕಲ್ಯಾಣ ನಡೆಯಿತು.

ಆಷಾಢ ಮಾಸದ ಅಷ್ಟಾಹಿಣಿಕ ಪರ್ವದ ಮೊದಲ ಅಷ್ಟಮಿಯ ದಿನದಂದು ಬೆಳಿಗ್ಗೆ 10.30ಗಂಟೆಗೆ ಜಿನ ಮಂದಿರದಲ್ಲಿ. ವಿಶೇಷ ಆರಾಧನೆ ಹಾಗೂ ವಿಶೇಷ. ಪೂಜೆಗಳು ನೆರವೇರಿದ ನಂತರ ವಿರಾಜಮಾನಗೊಂಡಿದೆ. ಈ ಪುಣ್ಯ ಕಾರ್ಯದಲ್ಲಿ ಶ್ರಾವಕ ಶ್ರಾವಕಿಯರು ಭಾಗವಹಿಸಿದರು.

ಉಜಿರೆಯ ಎಸ್.ಡಿ.ಶೆಟ್ಟಿ ದಂಪತಿಗಳನ್ನು ಗೌರವಿಸಲಾಯಿತು.ಆಡಳಿತ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು.

Leave a Reply

error: Content is protected !!