ನೆಲ್ಯಾಡಿ: ಒಕ್ಕೂಟದ ಪದಾಧಿಕಾರಿಗಳ ತರಬೇತಿ ಕಾರ್ಯಕ್ರಮ

ಶೇರ್ ಮಾಡಿ

ನೆಲ್ಯಾಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಬಿ ಸಿ ಟ್ರಸ್ಟ್ ಕಡಬ ತಾಲೂಕು ನೆಲ್ಯಾಡಿ ವಲಯದ ಒಕ್ಕೂಟಗಳ ಪದಾಧಿಕಾರಿಗಳ ತರಬೇತಿ ಕಾರ್ಯಕ್ರಮವು ನೆಲ್ಯಾಡಿಯ ಕೃಷಿ ಪತ್ತಿನ ಸಹಕಾರಿ ಸಂಘ ಸಭಾಂಗಣದಲ್ಲಿ ಆ.1ರಂದು ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ನೆಲ್ಯಾಡಿ ವಲಯ ಒಕ್ಕೂಟದ ಅಧ್ಯಕ್ಷ ಕುಶಾಲಪ್ಪ ಗೌಡ ದೀಪಪ್ರಜ್ವಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು ವೇದಿಕೆಯಲ್ಲಿ ಕಡಬ ತಾಲೂಕಿನ ಯೋಜನಾಧಿಕಾರಿ ಮೇದಪ್ಪ.ಗೌಡ.ಎನ್ ಅವರು ಪ್ರಾಸ್ತವಿಕ ಮಾತುಗಳೊಂದಿಗೆ ಶ್ರೀ ಕ್ಷೇತ್ರದಿಂದ ನಡೆಯುವ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದರು.

ದ.ಕ ಜಿಲ್ಲಾ ನಿರ್ದೇಶಕ ಪ್ರವೀಣ್ ಕುಮಾರ್ ಒಕ್ಕೂಟದ ಪದಾಧಿಕಾರಿಗಳಿಗೆ ಪ್ರಸ್ತುತ ವಿದ್ಯಮಾನಗಳ ಬಗ್ಗೆ ವಿವರಿಸಿ ತಂಡದ ಸದಸ್ಯರಿಗೆ ಕ್ಷೇತ್ರದಿಂದ ಮತ್ತು ಯೋಜನೆಯಿಂದ ಸಿಗುವ ಸವಲತ್ತುಗಳನ್ನು ಸಂಘದ ಸದಸ್ಯರಿಗೆ ಒದಗಿಸಿಕೊಡುವಲ್ಲಿ ಒಕ್ಕೂಟದ ಪದಾಧಿಕಾರಿಗಳು ಕೆಲಸ ನಿರ್ವಹಿಸಬೇಕೆಂದರು. ಯೋಜನೆ ಪದಾಧಿಕಾರಿಗಳಿಗೆ ಸ್ಥಾನಮಾನಗಳ ಜತೆಗೆ ಸದಸ್ಯರ ಸಮಸ್ಯೆಗೆ ಸ್ಪಂದಿಸುವ ಸದವಕಾಶ ಕಲ್ಪಿಸುತ್ತದೆ ಎಂದರು.

ವಿಚಕ್ಷಣಾಧಿಕಾರಿ ಶೀಲಾವತಿ, ನೆಲ್ಯಾಡಿ ವಲಯದ ಒಕ್ಕೂಟಗಳ ಅಧ್ಯಕ್ಷರುಗಳು, ಪದಾಧಿಕಾರಿಗಳು, ವಲಯದ ಸೇವಾಪ್ರತಿನಿಧಿಗಳು ಉಪಸ್ಥಿತರಿದ್ದರು.
ವಲಯ ಮೇಲ್ವಿಚಾರಕ ವಿಜೇಶ್ ಜೈನ್ ನಿರೂಪಿಸಿ ಸ್ವಾಗತಿಸಿದರು. ಸೇವಾಪ್ರತಿನಿಧಿ ಹೇಮಾವತಿ ವಂದಿಸಿದರು.

Leave a Reply

error: Content is protected !!