ಕಸ್ತೂರಿ ರಂಗನ್ ವರದಿ ಭಾಧ್ಯಸ್ಥರೊಂದಿಗೆ ಸಮಾಲೋಚನೆ ನಡಸಲು *ಬೆಳ್ತಂಗಡಿ ಧರ್ಮಪ್ರಾಂತ್ಯದ ಕೆಎಸ್ಎಂಸಿಎ ವತಿಯಿಂದ ಅಗ್ರಹ

ಶೇರ್ ಮಾಡಿ

ಕಸ್ತೂರಿ ರಂಗನ್ ವರದಿಯ ಅನುಷ್ಠಾನದ ಬಗ್ಗೆ ರಾಜ್ಯದ ಮಲೆನಾಡಿನ ರೈತರಲ್ಲಿ ಗೊಂದಲ ಹಾಗೂ ಭಯಮೂಡಿದೆ ಈ ಬಗ್ಗೆ ಕೃಷಿಕರಲ್ಲಿ ಮೂಡಿರುವ ಭಯ ಹೋಗಲಾಡಿಸಿ ರೈತರಿಗೆ ಯಾವುದೇ ತೊಂದರೆಯಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ಬೆಳ್ತಂಗಡಿ ಧರ್ಮಪ್ರಾಂತ್ಯ ಕೆಎಸ್ಎಂಸಿಎ ವತಿಯಿಂದ ಸಂಘಟನೆಯ ಅಧ್ಯಕ್ಷ ಬಿಟ್ಟಿ.ಬಿ ನೆಡುನಿಲಂ ಅವರ ನೇತೃತ್ವದಲ್ಲಿ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

ಕಸ್ತೂರಿ ರಂಗನ್ ವರದಿ ಅನುಷ್ಠಾನಗೊಂಡರೆ ತಮ್ಮ ಬದುಕನ್ನು ಕೃಷಿಭೂಮಿಯನ್ನು ಕಳೆದುಕೊಳ್ಳಬೇಕಾಗಲಿದೆ ಹಾಗೂ ತನ್ನಷ್ಟಕ್ಕೆ ಒಕ್ಕಳೇಳುವ ಪರಿಸ್ಥಿತಿ ನಿರ್ಮಾಣವಾಗಲಿದೆ ಎಂಬ ಭಯದಲ್ಲಿ ಸಾವಿರಾರು ಮಂದಿಯಲ್ಲಿದೆ. ಈ ಹಿನ್ನಲೆಯಲ್ಲಿ ಕಸ್ತೂರಿ ರಂಗನ್ ವರದಿಯ ಸಾದಕ – ಭಾದಕಗಳ ಬಗ್ಗೆ ಮರುಚಿಂತನೆ ನಡೆಸಿ ಕೃಷಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಕ್ರಮ ವಹಿಸಿ ಪಶ್ಚಿಮ ಘಟವನ್ನು ರಕ್ಷಣೆ ಮಾಡಬೇಕಾಗಿದೆ. ಪಶ್ಚಿಮ ಘಟದ ಜನವಾಸ ಯೋಗ್ಯವಲ್ಲದ ಪ್ರದೇಶದಲ್ಲಿರುವ ಜನರಿಗೆ ಬೇಕಾದ ಮಾಹಿತಿ ನೀಡಿ ಅಂತವರಿಗೆ ವಸತಿ ಹಾಗೂ ಪರಿಹಾರವನ್ನು ನೀಡುವ ಯೋಜನೆಯನ್ನು ರೂಪಿಸಿ ಕಸ್ತೂರಿ ರಂಗನ್ ವರದಿ ಜಾರಿ ಮಾಡಬೇಕು ಎಂದು ಅಗ್ರಹಿಸಿದರು.

ಆ.11 ರಂದು ಮಡಂತ್ಯಾರಿನಲ್ಲಿ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಅವರ ಸನ್ಮಾನ ಕಾರ್ಯಕ್ರಮದಲ್ಲಿ ಸಂಘಟನೆಯ ವತಿಯಿಂದ‌ ಸನ್ಮಾನಿಸಿ ಬಳಿಕ ಮನವಿ ನೀಡಲಾಯಿತು. ಈ ಸಂದರ್ಭದಲ್ಲಿ ಕೆಎಸ್ಎಂಸಿಎ ಮುಖಂಡರುಗಳಾದ ಸೇಬಸ್ಟಿಯನ್ ಮಲಯಾಟಿಲ್, ಜೈಸನ್ ಪಟ್ಟೀರಿ, ಟೊಮಿ ವೈಪನ, ರೆಜಿ ಬೆಳ್ತಂಗಡಿ ಹಾಗೂ ಸದಸ್ಯರು ಉಪಸ್ಥಿತರಿದ್ದರು. ಈಬಗ್ಗೆ ಸರಕಾರದ ಮಟ್ಟದಲ್ಲಿ ಸಚಿವರುಗಳೊಂದಿಗೆ ಮಾತುಕತೆ ನಡೆಸಿ ಸಭೆ ಕರೆದು ನಿಮ್ಮ ಅಹವಾಲುಗಳನ್ನು ಅವರಿಗೆ ತಿಳಿಸಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಐವನ್ ಡಿಸೋಜ ಅವರು ಭರವಸೆ ನೀಡಿದರು.

Leave a Reply

error: Content is protected !!