ನೆಲ್ಯಾಡಿ :ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ದೌರ್ಜನ್ಯ : ಆರೋಪಿ ಸೆರೆ

ಶೇರ್ ಮಾಡಿ

ನೆಲ್ಯಾಡಿ : ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ ಬಳಿಕ ಕೊಲ್ಲುವುದಾಗಿ ಜೀವ ಬೆದರಿಕೆ ಒಡ್ಡಿದ ಘಟನೆ ಸಂಬಂಧಿಸಿ ಉಪ್ಪಿನಂಗಡಿ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದ್ದು. ಆರೋಪಿ ಸತೀಶ ಎಂಬ ನನ್ನು ಪೊಲೀಸರು ಬಂಧಿಸಿದ್ದಾರೆ.

ಪಿಯುಸಿ ವ್ಯಾಸಂಗ ಮಾಡುತ್ತಿರುವ ನೆಲ್ಯಾಡಿಯ ವಿದ್ಯಾರ್ಥಿನಿಯು ಕಳೆದ ಜೂನ್ 14ರಂದು ತಾಯಿಯೊಂದಿಗೆ ಪುತ್ತೂರಿನ ಕ್ಲಿನಿಕ್ ಗೆ ಹೋಗುತ್ತಿದ್ದಾಗ ಅಲ್ಲಿಗೆ ಬಂದಿದ್ದ ಆರೋಪಿಯು ವಿದ್ಯಾರ್ಥಿನಿಯ ಪರಿಚಯ ಮಾಡಿಕೊಂಡು ಆಕೆಯ ತಾಯಿಯ ಮೊಬೈಲ್ ನಂಬರ್ ಪಡೆದುಕೊಂಡಿದ್ದ.

ಅದೇ ದಿನ ಆರೋಪಿಯು ಮೊಬೈಲ್ ನಲ್ಲಿ ಮೆಸೇಜ್ ಮಾಡಿ ವಿದ್ಯಾರ್ಥಿನಿಯ ಸಂಪರ್ಕ ಸಾಧಿಸಿದ್ದ. ಸಲುಗೆಯಿಂದ ಮಾತನಾಡಿಕೊಂಡಿದ್ದು. ಜುಲೈ 21ರಂದು ವಿದ್ಯಾರ್ಥಿನಿಗೆ ಕರೆ ಮಾಡಿ ನೆಲ್ಯಾಡಿಗೆ ಬರಲು ಹೇಳಿದ್ದ. ಅದರಂತೆ ವಿದ್ಯಾರ್ಥಿನಿ ಗೆಳೆಯರೊಂದಿಗೆ ನೆಲ್ಯಾಡಿಗೆ ಹೋಗಿ ಬರುವುದಾಗಿ ಮನೆಯಲ್ಲಿ ಹೇಳಿ ನೆಲ್ಯಾಡಿಗೆ ಬಂದಿದ್ದಳು. ಅಲ್ಲಿ ವಿದ್ಯಾರ್ಥಿನಿಯನ್ನು ಭೇಟಿ ಮಾಡಿದ ಆರೋಪಿಯು ಪಿಕಪ್ ವಾಹನದಲ್ಲಿ ಆಕೆಯನ್ನು ಕಾಂಚನಕ್ಕೆ ಒತ್ತಾಯ ಪೂರಕವಾಗಿ ಕರೆದುಕೊಂಡು ಹೋಗಿ ಒಳ ರಸ್ತೆಯ ಕಾಡು ಪ್ರದೇಶದಲ್ಲಿ ವಾಹನ ನಿಲ್ಲಿಸಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಬಲವಂತವಾಗಿ ಲೈಂಗಿಕ ದೌರ್ಜನ್ಯ ನಡೆಸಿ ಬಳಿಕ ವಿದ್ಯಾರ್ಥಿನಿಯನ್ನು ನೆಲ್ಯಾಡಿಯಲ್ಲಿ ಬಿಟ್ಟು ಹೋಗಿದ್ದ. ಈ ವಿಚಾರವನ್ನು ಯಾರೆಲ್ಲಾದರೂ ಹೇಳಿದರೆ ಜೀವಂತ ಬಿಡುವುದಿಲ್ಲ ಎಂದು ಜೀವ ಬೆದರಿಕೆ ಹಾಕಿದ್ದಾನೆ. ಎಂದು ಸಂತ್ರಸ್ತೆ ಉಪ್ಪಿನಂಗಡಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಉಪ್ಪಿನಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ.

Leave a Reply

error: Content is protected !!